النحل
ಕನ್ನಡ Translation with Arabic Quran Text
| ಕನ್ನಡ | العربية |
|---|---|
| 1 ಅಲ್ಲಾಹನ ಆಜ್ಞೆಯು ಬಂದಿದೆ. ಆದ್ದರಿಂದ ಅದಕ್ಕಾಗಿ ತ್ವರೆ ಮಾಡಬೇಡಿ. ಅವರು ಮಾಡುವ ಸಹಭಾಗಿತ್ವ (ಶಿರ್ಕ್) ದಿಂದ ಅಲ್ಲಾಹು ಎಷ್ಟೋ ಪರಿಶುದ್ಧನು ಮತ್ತು ಪರಮೋನ್ನತನಾಗಿದ್ದಾನೆ. | أَتَىٰٓ أَمْرُ ٱللَّهِ فَلَا تَسْتَعْجِلُوهُ ۚ سُبْحَٰنَهُۥ وَتَعَٰلَىٰ عَمَّا يُشْرِكُونَ. ﴿1﴾ |
| 2 “ನನ್ನ ಹೊರತು ಆರಾಧಿಸಲು ಅರ್ಹರಾದ ಬೇರೆ ದೇವರಿಲ್ಲ, ಆದ್ದರಿಂದ ನನ್ನನ್ನು ಭಯಪಡಲು ಜನರಿಗೆ ಎಚ್ಚರಿಕೆ ನೀಡಿರಿ” ಎಂಬ ಸಂದೇಶದೊಂದಿಗೆ, ಅವನು ತನ್ನ ದಾಸರಲ್ಲಿ ತಾನು ಇಚ್ಛಿಸುವವರ ಮೇಲೆ ತನ್ನ ಆಜ್ಞೆಯಂತೆ ದೇವವಾಣಿಯ ಸಹಿತ ದೇವದೂತರುಗಳನ್ನು ಇಳಿಸುತ್ತಾನೆ. | يُنَزِّلُ ٱلْمَلَٰٓئِكَةَ بِٱلرُّوحِ مِنْ أَمْرِهِۦ عَلَىٰ مَن يَشَآءُ مِنْ عِبَادِهِۦٓ أَنْ أَنذِرُوٓا۟ أَنَّهُۥ لَآ إِلَٰهَ إِلَّآ أَنَا۠ فَٱتَّقُونِ. ﴿2﴾ |
| 3 ಅವನು ಭೂಮ್ಯಾಕಾಶಗಳನ್ನು ಸತ್ಯದೊಂದಿಗೇ ಸೃಷ್ಟಿಸಿದ್ದಾನೆ. ಅವರು ಮಾಡುವ ಸಹಭಾಗಿತ್ವ (ಶಿರ್ಕ್) ದಿಂದ ಅವನು ಎಷ್ಟೋ ಪರಮೋನ್ನತನಾಗಿದ್ದಾನೆ. | خَلَقَ ٱلسَّمَٰوَٰتِ وَٱلْأَرْضَ بِٱلْحَقِّ ۚ تَعَٰلَىٰ عَمَّا يُشْرِكُونَ. ﴿3﴾ |
| 4 ಅವನು ಮಾನವನನ್ನು ವೀರ್ಯದಿಂದ ಸೃಷ್ಟಿಸಿದನು. ನಂತರ ಅಗೋ! ಮಾನವನು ಸ್ಪಷ್ಟ ಎದುರಾಳಿಯಾಗಿ ಬಿಟ್ಟಿದ್ದಾನೆ! | خَلَقَ ٱلْإِنسَٰنَ مِن نُّطْفَةٍۢ فَإِذَا هُوَ خَصِيمٌۭ مُّبِينٌۭ. ﴿4﴾ |
| 5 ಅವನು ಜಾನುವಾರುಗಳನ್ನು ಸಹ ಸೃಷ್ಟಿಸಿದನು. ಅವುಗಳಲ್ಲಿ ನಿಮಗೆ ಬೆಚ್ಚಗಿನ ಉಡುಪುಗಳಿವೆ. ಬೇರೆಯೂ ಪ್ರಯೋಜನಗಳಿವೆ. ಅವುಗಳನ್ನು ನೀವು ಆಹಾರವಾಗಿಯೂ ಸೇವಿಸುತ್ತೀರಿ. | وَٱلْأَنْعَٰمَ خَلَقَهَا ۗ لَكُمْ فِيهَا دِفْءٌۭ وَمَنَٰفِعُ وَمِنْهَا تَأْكُلُونَ. ﴿5﴾ |
| 6 ನೀವು ಅವುಗಳನ್ನು ಮೇಯಿಸಿ ಮುಸ್ಸಂಜೆ ಮರಳಿ ಕರೆತರುವಾಗ ಮತ್ತು ಅವುಗಳನ್ನು ಮೇಯಲು ಮುಂಜಾನೆ ಕರೆದುಕೊಂಡು ಹೋಗುವಾಗ ನಿಮಗೆ ಅವುಗಳಲ್ಲಿ ಸೌಂದರ್ಯವಿದೆ. | وَلَكُمْ فِيهَا جَمَالٌ حِينَ تُرِيحُونَ وَحِينَ تَسْرَحُونَ. ﴿6﴾ |
| 7 ನೀವು ಬಹಳ ಕಷ್ಟದಿಂದಲೇ ಹೊರತು ತಲುಪಲು ಸಾಧ್ಯವಿಲ್ಲದಂತಹ ದೇಶಗಳಿಗೆ ಅವು ನಿಮ್ಮ ಭಾರಗಳನ್ನು ಹೊತ್ತು ಸಾಗುತ್ತವೆ. ನಿಜಕ್ಕೂ ನಿಮ್ಮ ಪರಿಪಾಲಕನು (ಅಲ್ಲಾಹು) ಸಹಾನುಭೂತಿಯುಳ್ಳವನು ಮತ್ತು ದಯೆ ತೋರುವವನಾಗಿದ್ದಾನೆ. | وَتَحْمِلُ أَثْقَالَكُمْ إِلَىٰ بَلَدٍۢ لَّمْ تَكُونُوا۟ بَٰلِغِيهِ إِلَّا بِشِقِّ ٱلْأَنفُسِ ۚ إِنَّ رَبَّكُمْ لَرَءُوفٌۭ رَّحِيمٌۭ. ﴿7﴾ |
| 8 ಅವನು ಕುದುರೆಗಳನ್ನು, ಹೇಸರಗತ್ತೆಗಳನ್ನು ಮತ್ತು ಕತ್ತೆಗಳನ್ನು ಸೃಷ್ಟಿಸಿದನು. ನೀವು ಅವುಗಳ ಮೇಲೆ ಸವಾರಿ ಮಾಡುವುದಕ್ಕಾಗಿ ಮತ್ತು ನಿಮಗೊಂದು ಅಲಂಕಾರವಾಗಿ. ನೀವು ತಿಳಿಯದೇ ಇರುವುದನ್ನೂ ಅವನು ಸೃಷ್ಟಿಸುತ್ತಾನೆ. | وَٱلْخَيْلَ وَٱلْبِغَالَ وَٱلْحَمِيرَ لِتَرْكَبُوهَا وَزِينَةًۭ ۚ وَيَخْلُقُ مَا لَا تَعْلَمُونَ. ﴿8﴾ |
| 9 ನೇರ ಮಾರ್ಗವನ್ನು ತೋರಿಸಿಕೊಡುವುದು ಅಲ್ಲಾಹನ ಹೊಣೆಯಾಗಿದೆ. ಅವುಗಳಲ್ಲಿ ಕೆಲವು ವಕ್ರ ಮಾರ್ಗಗಳಿವೆ. ಅವನು ಇಚ್ಛಿಸುತ್ತಿದ್ದರೆ ನಿಮ್ಮೆಲ್ಲರಿಗೂ ಸನ್ಮಾರ್ಗ ತೋರಿಸುತ್ತಿದ್ದನು. | وَعَلَى ٱللَّهِ قَصْدُ ٱلسَّبِيلِ وَمِنْهَا جَآئِرٌۭ ۚ وَلَوْ شَآءَ لَهَدَىٰكُمْ أَجْمَعِينَ. ﴿9﴾ |
| 10 ಅವನೇ ಆಕಾಶದಿಂದ ಮಳೆಯನ್ನು ಇಳಿಸಿದವನು. ಅದರಲ್ಲಿ ನಿಮಗೆ ಕುಡಿಯುವ ನೀರಿದೆ. ಅದರಿಂದ ಉಂಟಾದ ಹುಲ್ಲುಗಾವಲುಗಳಲ್ಲಿ ನೀವು ನಿಮ್ಮ ಜಾನುವಾರುಗಳನ್ನು ಮೇಯಿಸುತ್ತೀರಿ. | هُوَ ٱلَّذِىٓ أَنزَلَ مِنَ ٱلسَّمَآءِ مَآءًۭ ۖ لَّكُم مِّنْهُ شَرَابٌۭ وَمِنْهُ شَجَرٌۭ فِيهِ تُسِيمُونَ. ﴿10﴾ |
| 11 ಅವನು ಅದರ (ನೀರಿನ) ಮೂಲಕ ನಿಮಗೆ ಪೈರುಗಳನ್ನು, ಆಲಿವ್, ಖರ್ಜೂರ, ದ್ರಾಕ್ಷಿ ಮತ್ತು ಎಲ್ಲ ವಿಧದ ಹಣ್ಣು-ಹಂಪಲುಗಳನ್ನು ಬೆಳೆಸುತ್ತಾನೆ. ನಿಶ್ಚಯವಾಗಿಯೂ ಆಲೋಚಿಸುವ ಜನರಿಗೆ ಅದರಲ್ಲಿ ದೃಷ್ಟಾಂತವಿದೆ. | يُنۢبِتُ لَكُم بِهِ ٱلزَّرْعَ وَٱلزَّيْتُونَ وَٱلنَّخِيلَ وَٱلْأَعْنَٰبَ وَمِن كُلِّ ٱلثَّمَرَٰتِ ۗ إِنَّ فِى ذَٰلِكَ لَءَايَةًۭ لِّقَوْمٍۢ يَتَفَكَّرُونَ. ﴿11﴾ |
| 12 ಅವನು ನಿಮಗೆ ರಾತ್ರಿ-ಹಗಲುಗಳನ್ನು ಮತ್ತು ಸೂರ್ಯ-ಚಂದ್ರರನ್ನು ನಿಯಂತ್ರಿಸಿಕೊಟ್ಟಿದ್ದಾನೆ. ನಕ್ಷತ್ರಗಳು ಅವನ ಆಜ್ಞೆಗೆ ವಿಧೇಯವಾಗಿವೆ. ನಿಶ್ಚಯವಾಗಿಯೂ ಅರ್ಥಮಾಡಿಕೊಳ್ಳುವ ಜನರಿಗೆ ಅದರಲ್ಲಿ ದೃಷ್ಟಾಂತಗಳಿವೆ. | وَسَخَّرَ لَكُمُ ٱلَّيْلَ وَٱلنَّهَارَ وَٱلشَّمْسَ وَٱلْقَمَرَ ۖ وَٱلنُّجُومُ مُسَخَّرَٰتٌۢ بِأَمْرِهِۦٓ ۗ إِنَّ فِى ذَٰلِكَ لَءَايَٰتٍۢ لِّقَوْمٍۢ يَعْقِلُونَ. ﴿12﴾ |
| 13 ಅವನು ನಿಮಗಾಗಿ ಇನ್ನೂ ಅನೇಕ ರಂಗುರಂಗಿನ ವಸ್ತುಗಳನ್ನು ಭೂಮಿಯಲ್ಲಿ ಹಬ್ಬಿಸಿದ್ದಾನೆ. ನಿಶ್ಚಯವಾಗಿಯೂ ಉಪದೇಶ ಸ್ವೀಕರಿಸುವ ಜನರಿಗೆ ಅದರಲ್ಲಿ ದೃಷ್ಟಾಂತವಿದೆ. | وَمَا ذَرَأَ لَكُمْ فِى ٱلْأَرْضِ مُخْتَلِفًا أَلْوَٰنُهُۥٓ ۗ إِنَّ فِى ذَٰلِكَ لَءَايَةًۭ لِّقَوْمٍۢ يَذَّكَّرُونَ. ﴿13﴾ |
| 14 ಅವನೇ ನಿಮಗೆ ಕಡಲನ್ನು ನಿಯಂತ್ರಿಸಿಕೊಟ್ಟವನು. ಅದರಿಂದ ನೀವು ತಾಜಾ ಮಾಂಸವನ್ನು (ಮೀನು) ಸೇವಿಸುತ್ತೀರಿ ಮತ್ತು ನೀವು ಧರಿಸುವ ಆಭರಣಗಳನ್ನು ಹೊರತೆಗೆಯುತ್ತೀರಿ. ನಾವೆಗಳು ಅದರ ನೀರನ್ನು ಸೀಳುತ್ತಾ ಸಾಗುವುದನ್ನು ನೀವು ನೋಡುತ್ತೀರಿ. ನೀವು ಅವನ (ಅಲ್ಲಾಹನ) ಅನುಗ್ರಹವನ್ನು ಅರಸುವುದಕ್ಕಾಗಿ ಮತ್ತು ಕೃತಜ್ಞರಾಗುವುದಕ್ಕಾಗಿ (ಇವೆಲ್ಲವನ್ನೂ ನಿಯಂತ್ರಿಸಿಕೊಡಲಾಗಿದೆ). | وَهُوَ ٱلَّذِى سَخَّرَ ٱلْبَحْرَ لِتَأْكُلُوا۟ مِنْهُ لَحْمًۭا طَرِيًّۭا وَتَسْتَخْرِجُوا۟ مِنْهُ حِلْيَةًۭ تَلْبَسُونَهَا وَتَرَى ٱلْفُلْكَ مَوَاخِرَ فِيهِ وَلِتَبْتَغُوا۟ مِن فَضْلِهِۦ وَلَعَلَّكُمْ تَشْكُرُونَ. ﴿14﴾ |
| 15 ಭೂಮಿಯು ನಿಮ್ಮೊಂದಿಗೆ ಅಲುಗಾಡದಿರಲು ಅವನು ಅದರಲ್ಲಿ ದೃಢವಾಗಿ ನಿಲ್ಲುವ ಪರ್ವತಗಳನ್ನು ಸ್ಥಾಪಿಸಿದನು. ಅವನು ನದಿಗಳನ್ನು ಮತ್ತು ರಸ್ತೆಗಳನ್ನು ಮಾಡಿಕೊಟ್ಟನು. ನೀವು ಉದ್ದೇಶಿತ ಸ್ಥಳಕ್ಕೆ ತಲುಪುವುದಕ್ಕಾಗಿ. | وَأَلْقَىٰ فِى ٱلْأَرْضِ رَوَٰسِىَ أَن تَمِيدَ بِكُمْ وَأَنْهَٰرًۭا وَسُبُلًۭا لَّعَلَّكُمْ تَهْتَدُونَ. ﴿15﴾ |
| 16 ಅವನು ಇನ್ನೂ ಅನೇಕ ಚಿಹ್ನೆಗಳನ್ನು ಮಾಡಿಕೊಟ್ಟನು. ನಕ್ಷತ್ರಗಳ ಮೂಲಕವೂ ಅವರು (ಜನರು) ದಾರಿಯನ್ನು ಕಂಡುಹಿಡಿಯುತ್ತಾರೆ. | وَعَلَٰمَٰتٍۢ ۚ وَبِٱلنَّجْمِ هُمْ يَهْتَدُونَ. ﴿16﴾ |
| 17 ಹಾಗಾದರೆ, ಸೃಷ್ಟಿಸುವವನು ಸೃಷ್ಟಿಸದವನಂತೆ ಆಗುವನೇ? ಆದರೂ ನೀವು ಉಪದೇಶ ಸ್ವೀಕರಿಸುವುದಿಲ್ಲವೇ? | أَفَمَن يَخْلُقُ كَمَن لَّا يَخْلُقُ ۗ أَفَلَا تَذَكَّرُونَ. ﴿17﴾ |
| 18 ನೀವು ಅಲ್ಲಾಹನ ಅನುಗ್ರಹಗಳನ್ನು ಎಣಿಸುವುದಾದರೆ ಅವುಗಳನ್ನು ಲೆಕ್ಕ ಮಾಡಲು ನಿಮಗೆ ಸಾಧ್ಯವಿಲ್ಲ. ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ. | وَإِن تَعُدُّوا۟ نِعْمَةَ ٱللَّهِ لَا تُحْصُوهَآ ۗ إِنَّ ٱللَّهَ لَغَفُورٌۭ رَّحِيمٌۭ. ﴿18﴾ |
| 19 ನೀವು ರಹಸ್ಯವಾಗಿಡುವುದನ್ನು ಮತ್ತು ಬಹಿರಂಗಪಡಿಸುವುದನ್ನು ಅಲ್ಲಾಹು ತಿಳಿಯುತ್ತಾನೆ. | وَٱللَّهُ يَعْلَمُ مَا تُسِرُّونَ وَمَا تُعْلِنُونَ. ﴿19﴾ |
| 20 ಅವರು ಅಲ್ಲಾಹನನ್ನು ಬಿಟ್ಟು ಯಾರನ್ನೆಲ್ಲಾ ಕರೆದು ಪ್ರಾರ್ಥಿಸುತ್ತಾರೋ ಅವರು ಏನೂ ಸೃಷ್ಟಿಸುವುದಿಲ್ಲ. ವಾಸ್ತವವಾಗಿ, ಅವರೇ ಸೃಷ್ಟಿಗಳಾಗಿದ್ದಾರೆ. | وَٱلَّذِينَ يَدْعُونَ مِن دُونِ ٱللَّهِ لَا يَخْلُقُونَ شَيْـًۭٔا وَهُمْ يُخْلَقُونَ. ﴿20﴾ |
|
21
ಅವರು ನಿರ್ಜೀವಿಗಳು; ಜೀವವಿರುವವರಲ್ಲ. ಅವರನ್ನು ಯಾವಾಗ ಜೀವ ನೀಡಿ ಎಬ್ಬಿಸಲಾಗುವುದೆಂದು ಕೂಡ ಅವರು ತಿಳಿದಿಲ್ಲ.[1]
[1] ನಿರ್ಜೀವಿಗಳು ಎಂದರೆ ಕಲ್ಲುಗಳು, ವಿಗ್ರಹಗಳು ಇತ್ಯಾದಿ. ಮೃತ ಮಹಾಪುರುಷರು ಕೂಡ ಇದರಲ್ಲಿ ಸೇರುತ್ತಾರೆ. ಏಕೆಂದರೆ ನಿರ್ಜೀವಿಗಳು ಎಂದು ಹೇಳಿದ ಬಳಿಕ ಅವರನ್ನು ಜೀವವಿರುವವರಲ್ಲ ಎಂದು ವರ್ಣಿಸಲಾಗಿದೆ. ಇದರಿಂದ ತಿಳಿದುಬರುವ ಪ್ರಕಾರ ಮರಣದ ನಂತರ ಯಾರಿಗೂ ಇಹಲೋಕದೊಂದಿಗೆ ಯಾವುದೇ ಸಂಬಂಧವಿರುವುದಿಲ್ಲ. ಅವರು ಪ್ರವಾದಿಗಳು ಅಥವಾ ಮಹಾಪುರುಷರಾಗಿದ್ದರೂ ಸಹ. ಅವರನ್ನು ಯಾವಾಗ ಜೀವ ನೀಡಿ ಎಬ್ಬಿಸಲಾಗುವುದೆಂದೂ ಅವರು ತಿಳಿದಿಲ್ಲ. ಹೀಗಿರುವಾಗ, ಉಪಕಾರ ಮಾಡಲು ಮತ್ತು ತೊಂದರೆ ನಿವಾರಿಸಲು ಅವರನ್ನು ಕರೆದು ಪ್ರಾರ್ಥಿಸುವುದು ವ್ಯರ್ಥ ಮಾತ್ರವಲ್ಲ, ಅದು ಅರ್ಥಶೂನ್ಯವೂ ಆಗಿದೆ.
|
أَمْوَٰتٌ غَيْرُ أَحْيَآءٍۢ ۖ وَمَا يَشْعُرُونَ أَيَّانَ يُبْعَثُونَ. ﴿21﴾ |
|
22
ನಿಮ್ಮ ದೇವರು ಏಕೈಕ ದೇವರು. ಪರಲೋಕದಲ್ಲಿ ವಿಶ್ವಾಸವಿಲ್ಲದವರ ಹೃದಯಗಳಲ್ಲಿ ಅಸಮ್ಮತಿಯಿದೆ.[1] ಅವರು ಅಹಂಕಾರದಿಂದ ವರ್ತಿಸುತ್ತಾರೆ.
[1] ಏಕೈಕ ದೇವನಲ್ಲಿ ವಿಶ್ವಾಸವಿಡಲು ಅವರು ಹಿಂಜರಿಯುತ್ತಾರೆ. ಮಾತ್ರವಲ್ಲ, ಏಕದೇವವಿಶ್ವಾಸದ ಕಡೆಗೆ ಕರೆದರೆ ಅವರು ಅಹಂಕಾರದಿಂದ ವರ್ತಿಸುತ್ತಾರೆ. ನೋಡಿ: 37:35.
|
إِلَٰهُكُمْ إِلَٰهٌۭ وَٰحِدٌۭ ۚ فَٱلَّذِينَ لَا يُؤْمِنُونَ بِٱلْءَاخِرَةِ قُلُوبُهُم مُّنكِرَةٌۭ وَهُم مُّسْتَكْبِرُونَ. ﴿22﴾ |
| 23 ಸಂಶಯವೇ ಇಲ್ಲ! ಅವರು ಮುಚ್ಚಿಡುವುದನ್ನು ಮತ್ತು ಬಹಿರಂಗಪಡಿಸುವುದನ್ನು ಅಲ್ಲಾಹು ಸ್ಪಷ್ಟವಾಗಿ ತಿಳಿಯುತ್ತಾನೆ. ಅವನು ಅಹಂಕಾರಿಗಳನ್ನು ಇಷ್ಟಪಡುವುದಿಲ್ಲ. | لَا جَرَمَ أَنَّ ٱللَّهَ يَعْلَمُ مَا يُسِرُّونَ وَمَا يُعْلِنُونَ ۚ إِنَّهُۥ لَا يُحِبُّ ٱلْمُسْتَكْبِرِينَ. ﴿23﴾ |
| 24 “ನಿಮ್ಮ ಪರಿಪಾಲಕನು (ಅಲ್ಲಾಹು) ಏನನ್ನು ಅವತೀರ್ಣಗೊಳಿಸಿದನು?” ಎಂದು ಅವರೊಡನೆ ಕೇಳಲಾದರೆ, “ಪ್ರಾಚೀನ ಕಾಲದ ಜನರ ಪುರಾಣಗಳನ್ನು” ಎಂದು ಅವರು ಉತ್ತರಿಸುತ್ತಾರೆ. | وَإِذَا قِيلَ لَهُم مَّاذَآ أَنزَلَ رَبُّكُمْ ۙ قَالُوٓا۟ أَسَٰطِيرُ ٱلْأَوَّلِينَ. ﴿24﴾ |
| 25 ಇದರ ಪರಿಣಾಮವಾಗಿ ಪುನರುತ್ಥಾನ ದಿನದಂದು ಅವರು ತಮ್ಮ ಪಾಪದ ಹೊರೆಯನ್ನು ಪೂರ್ಣವಾಗಿ ಹೊರುತ್ತಾರೆ ಮತ್ತು ಯಾವುದೇ ಜ್ಞಾನವಿಲ್ಲದೆ ಅವರು ಯಾರನ್ನೆಲ್ಲಾ ದಾರಿತಪ್ಪಿಸಿದ್ದಾರೋ ಅವರ ಪಾಪದ ಒಂದು ಭಾಗವನ್ನು ಕೂಡ ಹೊರುತ್ತಾರೆ. ತಿಳಿಯಿರಿ! ಅವರು ಹೊರುವ ಹೊರೆ ಬಹಳ ನಿಕೃಷ್ಟವಾಗಿದೆ. | لِيَحْمِلُوٓا۟ أَوْزَارَهُمْ كَامِلَةًۭ يَوْمَ ٱلْقِيَٰمَةِ ۙ وَمِنْ أَوْزَارِ ٱلَّذِينَ يُضِلُّونَهُم بِغَيْرِ عِلْمٍ ۗ أَلَا سَآءَ مَا يَزِرُونَ. ﴿25﴾ |
| 26 ಅವರಿಗಿಂತ ಮೊದಲಿನವರು ಕೂಡ ಪಿತೂರಿ ಮಾಡಿದ್ದರು. ಆಗ ಅಲ್ಲಾಹು ಅವರು ಕಟ್ಟಡದ ಅಡಿಪಾಯವನ್ನೇ ಅಲುಗಾಡಿಸಿದನು. ಆಗ ಅದರ ಛಾವಣಿಯು ಅವರ ತಲೆಯ ಮೇಲೆ ಕುಸಿದು ಬಿತ್ತು. ಅವರು ನಿರೀಕ್ಷಿಸದ ಕಡೆಯಿಂದ ಶಿಕ್ಷೆಯು ಅವರ ಬಳಿಗೆ ಬಂತು. | قَدْ مَكَرَ ٱلَّذِينَ مِن قَبْلِهِمْ فَأَتَى ٱللَّهُ بُنْيَٰنَهُم مِّنَ ٱلْقَوَاعِدِ فَخَرَّ عَلَيْهِمُ ٱلسَّقْفُ مِن فَوْقِهِمْ وَأَتَىٰهُمُ ٱلْعَذَابُ مِنْ حَيْثُ لَا يَشْعُرُونَ. ﴿26﴾ |
| 27 ನಂತರ ಪುನರುತ್ಥಾನ ದಿನದಂದು ಅವನು ಅವರನ್ನು ಅವಮಾನಿಸುತ್ತಾ ಕೇಳುವನು: “ನೀವು ನನಗೆ ಸಹಭಾಗಿಗಳಾಗಿ ಮಾಡಿದ ಆ ದೇವರುಗಳು ಎಲ್ಲಿದ್ದಾರೆ? ಅವರ ವಿಷಯದಲ್ಲಿ ನೀವು (ಸತ್ಯವಿಶ್ವಾಸಿಗಳನ್ನು) ವಿರೋಧಿಸುತ್ತಿದ್ದಿರಲ್ಲವೇ?” ಜ್ಞಾನಿಗಳು ಹೇಳುವರು: “ನಿಶ್ಚಯವಾಗಿಯೂ ಸತ್ಯನಿಷೇಧಿಗಳಿಗೆ ಇಂದು ಅವಮಾನ ಮತ್ತು ಕೆಡುಕು ಕಾದಿದೆ.” | ثُمَّ يَوْمَ ٱلْقِيَٰمَةِ يُخْزِيهِمْ وَيَقُولُ أَيْنَ شُرَكَآءِىَ ٱلَّذِينَ كُنتُمْ تُشَٰٓقُّونَ فِيهِمْ ۚ قَالَ ٱلَّذِينَ أُوتُوا۟ ٱلْعِلْمَ إِنَّ ٱلْخِزْىَ ٱلْيَوْمَ وَٱلسُّوٓءَ عَلَى ٱلْكَٰفِرِينَ. ﴿27﴾ |
| 28 ಅವರು ಯಾರೆಂದರೆ, ಸ್ವಯಂ ಅಕ್ರಮವೆಸಗಿದ ಸ್ಥಿತಿಯಲ್ಲಿ ದೇವದೂತರುಗಳು ಯಾರ ಆತ್ಮವನ್ನು ವಶಪಡಿಸುವರೋ ಅವರು. ಆಗ ಅವರು “ನಾವು ಯಾವುದೇ ತಪ್ಪು ಮಾಡಿಲ್ಲ” ಎನ್ನುತ್ತಾ ಶರಣಾಗುವರು. ಹೌದು! ನೀವು ಮಾಡುತ್ತಿರುವ ಕರ್ಮಗಳ ಬಗ್ಗೆ ಅಲ್ಲಾಹು ಬಹಳ ಚೆನ್ನಾಗಿ ತಿಳಿದಿದ್ದಾನೆ. | ٱلَّذِينَ تَتَوَفَّىٰهُمُ ٱلْمَلَٰٓئِكَةُ ظَالِمِىٓ أَنفُسِهِمْ ۖ فَأَلْقَوُا۟ ٱلسَّلَمَ مَا كُنَّا نَعْمَلُ مِن سُوٓءٍۭ ۚ بَلَىٰٓ إِنَّ ٱللَّهَ عَلِيمٌۢ بِمَا كُنتُمْ تَعْمَلُونَ. ﴿28﴾ |
| 29 ಆದ್ದರಿಂದ ನೀವು ನರಕದ ಬಾಗಿಲುಗಳನ್ನು ಪ್ರವೇಶ ಮಾಡಿರಿ. ನೀವು ಅದರಲ್ಲಿ ಶಾಶ್ವತವಾಗಿ ವಾಸಿಸುವಿರಿ. ಅಹಂಕಾರಿಗಳ ವಾಸಸ್ಥಳವು ಬಹಳ ನಿಕೃಷ್ಟವಾಗಿದೆ. | فَٱدْخُلُوٓا۟ أَبْوَٰبَ جَهَنَّمَ خَٰلِدِينَ فِيهَا ۖ فَلَبِئْسَ مَثْوَى ٱلْمُتَكَبِّرِينَ. ﴿29﴾ |
| 30 “ನಿಮ್ಮ ಪರಿಪಾಲಕನು (ಅಲ್ಲಾಹು) ಏನನ್ನು ಅವತೀರ್ಣಗೊಳಿಸಿದನು?” ಎಂದು ದೇವಭಯವುಳ್ಳವರೊಡನೆ ಕೇಳಲಾದರೆ, ಅವರು ಹೇಳುವರು: “ಅತ್ಯುತ್ತಮವಾದುದನ್ನು.” ಒಳಿತು ಮಾಡುವವರಿಗೆ ಇಹಲೋಕದಲ್ಲೇ ಒಳಿತಿದೆ. ಪರಲೋಕ ಭವನವಂತೂ ಅತಿಶ್ರೇಷ್ಠವಾಗಿದೆ. ದೇವಭಯವುಳ್ಳವರ ಭವನವು ಬಹಳ ಉತ್ತಮವಾಗಿದೆ. | ۞ وَقِيلَ لِلَّذِينَ ٱتَّقَوْا۟ مَاذَآ أَنزَلَ رَبُّكُمْ ۚ قَالُوا۟ خَيْرًۭا ۗ لِّلَّذِينَ أَحْسَنُوا۟ فِى هَٰذِهِ ٱلدُّنْيَا حَسَنَةٌۭ ۚ وَلَدَارُ ٱلْءَاخِرَةِ خَيْرٌۭ ۚ وَلَنِعْمَ دَارُ ٱلْمُتَّقِينَ. ﴿30﴾ |
| 31 ತಳಭಾಗದಿಂದ ನದಿಗಳು ಹರಿಯುವ ಶಾಶ್ವತವಾಸಕ್ಕಿರುವ ಸ್ವರ್ಗೋದ್ಯಾನಗಳನ್ನು ಅವರು ಪ್ರವೇಶಿಸುವರು. ಅವರು ಇಚ್ಛಿಸುವುದೆಲ್ಲವೂ ಅಲ್ಲಿ ಅವರಿಗೆ ದೊರೆಯುವುದು. ಈ ರೀತಿ ಅಲ್ಲಾಹು ದೇವಭಯವುಳ್ಳವರಿಗೆ ಪ್ರತಿಫಲವನ್ನು ನೀಡುತ್ತಾನೆ. | جَنَّٰتُ عَدْنٍۢ يَدْخُلُونَهَا تَجْرِى مِن تَحْتِهَا ٱلْأَنْهَٰرُ ۖ لَهُمْ فِيهَا مَا يَشَآءُونَ ۚ كَذَٰلِكَ يَجْزِى ٱللَّهُ ٱلْمُتَّقِينَ. ﴿31﴾ |
| 32 ಪರಿಶುದ್ಧ ಜನರ ಆತ್ಮಗಳನ್ನು ವಶಪಡಿಸುವಾಗ ದೇವದೂತರುಗಳು ಹೇಳುವರು: “ನಿಮಗೆ ಶಾಂತಿಯಿರಲಿ. ನೀವು ಮಾಡಿದ ಕರ್ಮಗಳ ಫಲವಾಗಿ ಸ್ವರ್ಗಲೋಕವನ್ನು ಪ್ರವೇಶ ಮಾಡಿರಿ.” | ٱلَّذِينَ تَتَوَفَّىٰهُمُ ٱلْمَلَٰٓئِكَةُ طَيِّبِينَ ۙ يَقُولُونَ سَلَٰمٌ عَلَيْكُمُ ٱدْخُلُوا۟ ٱلْجَنَّةَ بِمَا كُنتُمْ تَعْمَلُونَ. ﴿32﴾ |
| 33 ತಮ್ಮ ಬಳಿಗೆ ದೇವದೂತರುಗಳು ಬರುವುದನ್ನು ಅಥವಾ ತಮ್ಮ ಪರಿಪಾಲಕನ (ಅಲ್ಲಾಹನ) ಆಜ್ಞೆ ಬರುವುದನ್ನು ಮಾತ್ರ ಅವರು ಕಾಯುತ್ತಿದ್ದಾರೆಯೇ? ಅವರಿಗಿಂತ ಮೊದಲಿನವರು ಕೂಡ ಹೀಗೆಯೇ ಮಾಡಿದ್ದರು. ಅಲ್ಲಾಹು ಅವರಿಗೆ ಅನ್ಯಾಯ ಮಾಡಿಲ್ಲ. ಆದರೆ ಅವರು ಅವರೊಂದಿಗೇ ಅನ್ಯಾಯ ಮಾಡಿದರು. | هَلْ يَنظُرُونَ إِلَّآ أَن تَأْتِيَهُمُ ٱلْمَلَٰٓئِكَةُ أَوْ يَأْتِىَ أَمْرُ رَبِّكَ ۚ كَذَٰلِكَ فَعَلَ ٱلَّذِينَ مِن قَبْلِهِمْ ۚ وَمَا ظَلَمَهُمُ ٱللَّهُ وَلَٰكِن كَانُوٓا۟ أَنفُسَهُمْ يَظْلِمُونَ. ﴿33﴾ |
| 34 ಆದ್ದರಿಂದ ಅವರು ಮಾಡಿದ ದುಷ್ಕರ್ಮಗಳ ಫಲವನ್ನು ಅವರು ಉಂಡರು. ಅವರು ಯಾವುದನ್ನು ತಮಾಷೆ ಮಾಡುತ್ತಿದ್ದರೋ ಅದು ಅವರನ್ನು ಆವರಿಸಿಯೇ ಬಿಟ್ಟಿತು. | فَأَصَابَهُمْ سَيِّـَٔاتُ مَا عَمِلُوا۟ وَحَاقَ بِهِم مَّا كَانُوا۟ بِهِۦ يَسْتَهْزِءُونَ. ﴿34﴾ |
| 35 ಅಲ್ಲಾಹನೊಂದಿಗೆ (ಬೇರೆ ದೇವರುಗಳನ್ನು) ಸಹಭಾಗಿಗಳನ್ನಾಗಿ ಮಾಡಿದವರು ಹೇಳಿದರು: “ಅಲ್ಲಾಹು ಇಚ್ಛಿಸುತ್ತಿದ್ದರೆ ನಾವು ಅಥವಾ ನಮ್ಮ ಪೂರ್ವಜರು ಅಲ್ಲಾಹನನ್ನು ಬಿಟ್ಟು ಬೇರೆ ಯಾರನ್ನೂ ಆರಾಧಿಸುತ್ತಿರಲಿಲ್ಲ. ಅವನು ಆಜ್ಞಾಪಿಸಿದ್ದಲ್ಲದೆ ಬೇರೇನನ್ನೂ ನಾವು ನಿಷಿದ್ಧವೆನ್ನುತ್ತಿರಲಿಲ್ಲ.” ಅವರಿಗಿಂತ ಮೊದಲಿನವರೂ ಹೀಗೆಯೇ ಮಾಡಿದ್ದರು. ಸಂದೇಶವಾಹಕರಿಗೆ ಸಂದೇಶವನ್ನು ತಲುಪಿಸುವುದಲ್ಲದೆ ಬೇರೇನಾದರೂ ಹೊಣೆಗಾರಿಕೆಯಿದೆಯೇ? | وَقَالَ ٱلَّذِينَ أَشْرَكُوا۟ لَوْ شَآءَ ٱللَّهُ مَا عَبَدْنَا مِن دُونِهِۦ مِن شَىْءٍۢ نَّحْنُ وَلَآ ءَابَآؤُنَا وَلَا حَرَّمْنَا مِن دُونِهِۦ مِن شَىْءٍۢ ۚ كَذَٰلِكَ فَعَلَ ٱلَّذِينَ مِن قَبْلِهِمْ ۚ فَهَلْ عَلَى ٱلرُّسُلِ إِلَّا ٱلْبَلَٰغُ ٱلْمُبِينُ. ﴿35﴾ |
| 36 “ಅಲ್ಲಾಹನನ್ನು ಆರಾಧಿಸಿರಿ ಮತ್ತು ಮಿಥ್ಯ ದೇವರುಗಳನ್ನು ತೊರೆಯಿರಿ” ಎಂಬ ಸಂದೇಶದೊಂದಿಗೆ ನಾವು ಎಲ್ಲಾ ಸಮುದಾಯಗಳಿಗೂ ಸಂದೇಶವಾಹಕರನ್ನು ಕಳುಹಿಸಿದ್ದೇವೆ. ಅವರಲ್ಲಿ ಕೆಲವರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸಿದನು. ಕೆಲವರಿಗೆ ದುರ್ಮಾರ್ಗವು ಖಾತ್ರಿಯಾಗಿದೆ. ಆದ್ದರಿಂದ ನೀವು ಭೂಮಿಯಲ್ಲಿ ಸಂಚರಿಸಿ ಸತ್ಯನಿಷೇಧಿಗಳ ಅಂತ್ಯವು ಹೇಗಿತ್ತೆಂದು ನೋಡಿ. | وَلَقَدْ بَعَثْنَا فِى كُلِّ أُمَّةٍۢ رَّسُولًا أَنِ ٱعْبُدُوا۟ ٱللَّهَ وَٱجْتَنِبُوا۟ ٱلطَّٰغُوتَ ۖ فَمِنْهُم مَّنْ هَدَى ٱللَّهُ وَمِنْهُم مَّنْ حَقَّتْ عَلَيْهِ ٱلضَّلَٰلَةُ ۚ فَسِيرُوا۟ فِى ٱلْأَرْضِ فَٱنظُرُوا۟ كَيْفَ كَانَ عَٰقِبَةُ ٱلْمُكَذِّبِينَ. ﴿36﴾ |
| 37 (ಪ್ರವಾದಿಯವರೇ) ಅವರು ಸನ್ಮಾರ್ಗಿಗಳಾಗಬೇಕೆಂಬ ಹಂಬಲ ನಿಮಗಿದ್ದರೆ (ಅದು ವ್ಯರ್ಥ). ಅಲ್ಲಾಹು ಯಾರನ್ನು ದಾರಿತಪ್ಪಿಸುತ್ತಾನೋ ಅವನಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ. ಅವರಿಗೆ ಸಹಾಯ ಮಾಡುವವರು ಯಾರೂ ಇಲ್ಲ. | إِن تَحْرِصْ عَلَىٰ هُدَىٰهُمْ فَإِنَّ ٱللَّهَ لَا يَهْدِى مَن يُضِلُّ ۖ وَمَا لَهُم مِّن نَّٰصِرِينَ. ﴿37﴾ |
| 38 “ಅಲ್ಲಾಹು ಸತ್ತವರಿಗೆ ಜೀವ ನೀಡಿ ಎಬ್ಬಿಸುವುದಿಲ್ಲ” ಎಂದು ಅವರು ಬಲವಾಗಿ ಆಣೆ ಹಾಕುತ್ತಾ ಹೇಳಿದರು. ಹೌದು! (ಅವನು ಖಂಡಿತ ಜೀವ ನೀಡಿ ಎಬ್ಬಿಸುತ್ತಾನೆ). ಅದು ಅವನ ಸತ್ಯ ವಾಗ್ದಾನವಾಗಿದೆ. ಆದರೆ ಜನರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ. | وَأَقْسَمُوا۟ بِٱللَّهِ جَهْدَ أَيْمَٰنِهِمْ ۙ لَا يَبْعَثُ ٱللَّهُ مَن يَمُوتُ ۚ بَلَىٰ وَعْدًا عَلَيْهِ حَقًّۭا وَلَٰكِنَّ أَكْثَرَ ٱلنَّاسِ لَا يَعْلَمُونَ. ﴿38﴾ |
| 39 ಅದೇಕೆಂದರೆ, ಯಾವ ವಿಷಯದಲ್ಲಿ ಅವರು ಭಿನ್ನಮತ ತಳೆದರೋ ಅದನ್ನು ಅವರಿಗೆ ವಿವರಿಸಿಕೊಡುವುದಕ್ಕಾಗಿ ಮತ್ತು ಸತ್ಯನಿಷೇಧಿಗಳು ಸುಳ್ಳು ಹೇಳುವವರೆಂದು ಅವರು ಮನವರಿಕೆಯಾಗುವುದಕ್ಕಾಗಿ. | لِيُبَيِّنَ لَهُمُ ٱلَّذِى يَخْتَلِفُونَ فِيهِ وَلِيَعْلَمَ ٱلَّذِينَ كَفَرُوٓا۟ أَنَّهُمْ كَانُوا۟ كَٰذِبِينَ. ﴿39﴾ |
| 40 ನಾವು ಒಂದು ವಸ್ತುವನ್ನು ಬಯಸಿದರೆ ಅದರೊಡನೆ ನಮ್ಮ ಮಾತು “ಉಂಟಾಗು” ಎಂದು ಹೇಳುವುದು ಮಾತ್ರವಾಗಿದೆ. ಆಗ ಅದು ಉಂಟಾಗುತ್ತದೆ. | إِنَّمَا قَوْلُنَا لِشَىْءٍ إِذَآ أَرَدْنَٰهُ أَن نَّقُولَ لَهُۥ كُن فَيَكُونُ. ﴿40﴾ |
| 41 ಹಿಂಸೆಗೆ ಗುರಿಯಾದ ಬಳಿಕವೂ ಅಲ್ಲಾಹನ ಮಾರ್ಗದಲ್ಲಿ ವಲಸೆ (ಹಿಜ್ರ) ಮಾಡಿದವರು ಯಾರೋ—ಅವರಿಗೆ ನಾವು ಇಹಲೋಕದಲ್ಲಿ ಉತ್ತಮ ವಾಸ್ತವ್ಯವನ್ನು ಮಾಡಿಕೊಡುವೆವು. ಪರಲೋಕದ ಪ್ರತಿಫಲವಂತೂ ಅತಿಶ್ರೇಷ್ಠವಾದುದು. ಅವರು ಅದನ್ನು ತಿಳಿದಿರುತ್ತಿದ್ದರೆ! | وَٱلَّذِينَ هَاجَرُوا۟ فِى ٱللَّهِ مِنۢ بَعْدِ مَا ظُلِمُوا۟ لَنُبَوِّئَنَّهُمْ فِى ٱلدُّنْيَا حَسَنَةًۭ ۖ وَلَأَجْرُ ٱلْءَاخِرَةِ أَكْبَرُ ۚ لَوْ كَانُوا۟ يَعْلَمُونَ. ﴿41﴾ |
| 42 ಅವರು ಯಾರೆಂದರೆ, ಸಹಿಷ್ಣುತೆಯುಳ್ಳವರು ಮತ್ತು ತಮ್ಮ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ಭರವಸೆಯಿಡುವವರು. | ٱلَّذِينَ صَبَرُوا۟ وَعَلَىٰ رَبِّهِمْ يَتَوَكَّلُونَ. ﴿42﴾ |
|
43
ನಿಮಗಿಂತ ಮೊದಲು ನಾವು ಸಂದೇಶವಾಹಕರನ್ನಾಗಿ ಪುರುಷರನ್ನು ಮಾತ್ರ ಕಳುಹಿಸಿದ್ದೆವು. ಅವರಿಗೆ ನಾವು ದೇವವಾಣಿಯನ್ನು ನೀಡುತ್ತಿದ್ದೆವು. ನಿಮಗೆ ಅರಿವಿಲ್ಲದಿದ್ದರೆ ವಿದ್ವಾಂಸರೊಡನೆ ಕೇಳಿ ನೋಡಿ.[1]
[1] ವಿದ್ವಾಂಸರು ಎಂದರೆ ಯಹೂದಿಗಳು ಮತ್ತು ಕ್ರೈಸ್ತರಲ್ಲಿರುವ ವಿದ್ವಾಂಸರು. ಈ ಮಾತಿನ ಅರ್ಥವೇನೆಂದರೆ, ಅಲ್ಲಾಹು ಕಳುಹಿಸಿದ ಪ್ರವಾದಿಗಳೆಲ್ಲರೂ ಮನುಷ್ಯರಾಗಿದ್ದರು. ಆದ್ದರಿಂದ ಪ್ರವಾದಿ ಮುಹಮ್ಮದ್ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮನುಷ್ಯರಾಗಿರುವುದರಲ್ಲಿ ಅಚ್ಚರಿಯೇನಿಲ್ಲ. ಅವರಿಗಿಂತ ಮೊದಲು ಬಂದ ಸಂದೇಶವಾಹಕರುಗಳು ಮನುಷ್ಯರಾಗಿದ್ದರೋ ಅಲ್ಲವೋ ಎಂದು ನಿಮಗೆ ಸಂಶಯವಿದ್ದರೆ ಯಹೂದಿ-ಕ್ರೈಸ್ತರಲ್ಲಿರುವ ವಿದ್ವಾಂಸರೊಡನೆ ಕೇಳಿ ನೋಡಿ.
|
وَمَآ أَرْسَلْنَا مِن قَبْلِكَ إِلَّا رِجَالًۭا نُّوحِىٓ إِلَيْهِمْ ۚ فَسْـَٔلُوٓا۟ أَهْلَ ٱلذِّكْرِ إِن كُنتُمْ لَا تَعْلَمُونَ. ﴿43﴾ |
| 44 ಸ್ಪಷ್ಟ ಸಾಕ್ಷ್ಯಾಧಾರಗಳು ಮತ್ತು ಗ್ರಂಥಗಳೊಂದಿಗೆ (ನಾವು ಅವರನ್ನು ಕಳುಹಿಸಿದ್ದೇವೆ). (ಪ್ರವಾದಿಯವರೇ) ನಾವು ಈ ಗ್ರಂಥವನ್ನು ನಿಮಗೆ ಅವತೀರ್ಣಗೊಳಿಸಿರುವುದು ಜನರಿಗೆ ಅವತೀರ್ಣವಾದ ಸಂದೇಶವನ್ನು ನೀವು ಅವರಿಗೆ ವಿವರಿಸಿಕೊಡುವುದಕ್ಕಾಗಿ ಮತ್ತು ಅವರು ಆಲೋಚಿಸುವುದಕ್ಕಾಗಿ. | بِٱلْبَيِّنَٰتِ وَٱلزُّبُرِ ۗ وَأَنزَلْنَآ إِلَيْكَ ٱلذِّكْرَ لِتُبَيِّنَ لِلنَّاسِ مَا نُزِّلَ إِلَيْهِمْ وَلَعَلَّهُمْ يَتَفَكَّرُونَ. ﴿44﴾ |
| 45 ಕೆಟ್ಟ ಪಿತೂರಿಗಳನ್ನು ಮಾಡುವವರು—ಅವರನ್ನು ಅಲ್ಲಾಹು ಭೂಮಿಯಲ್ಲಿ ಹುದುಗಿಸಿ ಬಿಡಲಾರನು ಅಥವಾ ಅವರು ನಿರೀಕ್ಷಿಸದ ಕಡೆಯಿಂದ ಅವರಿಗೆ ಶಿಕ್ಷೆಯು ಬಂದೆರಗಲಾರದು ಎಂದು ನಿರ್ಭಯರಾಗಿದ್ದಾರೆಯೇ? | أَفَأَمِنَ ٱلَّذِينَ مَكَرُوا۟ ٱلسَّيِّـَٔاتِ أَن يَخْسِفَ ٱللَّهُ بِهِمُ ٱلْأَرْضَ أَوْ يَأْتِيَهُمُ ٱلْعَذَابُ مِنْ حَيْثُ لَا يَشْعُرُونَ. ﴿45﴾ |
| 46 ಅಥವಾ ಅವರು ತಮ್ಮ ಕೆಲಸ-ಕಾರ್ಯಗಳಲ್ಲಿ ನಿರತರಾಗಿರುವಾಗ ಅಲ್ಲಾಹು ಅವರನ್ನು ಹಿಡಿಯಲಾರನೆಂದು (ಅವರು ನಿರ್ಭಯರಾಗಿದ್ದಾರೆಯೇ)? ಏನೇ ಆದರೂ ಅಲ್ಲಾಹನನ್ನು ಸೋಲಿಸಲು ಅವರಿಗೆ ಸಾಧ್ಯವಿಲ್ಲ. | أَوْ يَأْخُذَهُمْ فِى تَقَلُّبِهِمْ فَمَا هُم بِمُعْجِزِينَ. ﴿46﴾ |
| 47 ಅಥವಾ ಅವರನ್ನು ಹೆದರುವಂತೆ ಮಾಡಿ ಹಿಡಿಯಲಾರನೆಂದು (ಅವರು ನಿರ್ಭಯರಾಗಿದ್ದಾರೆಯೇ)? ಆದರೆ ನಿಮ್ಮ ಪರಿಪಾಲಕನು (ಅಲ್ಲಾಹು) ಅತ್ಯಂತ ಸಹಾನುಭೂತಿಯುಳ್ಳವನು ಮತ್ತು ಅತ್ಯಧಿಕ ದಯೆ ತೋರುವವನಾಗಿದ್ದಾನೆ. | أَوْ يَأْخُذَهُمْ عَلَىٰ تَخَوُّفٍۢ فَإِنَّ رَبَّكُمْ لَرَءُوفٌۭ رَّحِيمٌ. ﴿47﴾ |
| 48 ಅಲ್ಲಾಹು ಸೃಷ್ಟಿಸಿದ ಯಾವುದಾದರೂ ವಸ್ತುವನ್ನು ಅವರು ನೋಡುವುದಿಲ್ಲವೇ? ಅದರ ನೆರಳು ಬಲಭಾಗದಲ್ಲೂ ಎಡಭಾಗದಲ್ಲೂ ಅಲ್ಲಾಹನಿಗೆ ಸಾಷ್ಟಾಂಗ ಮಾಡುತ್ತದೆ ಮತ್ತು ತನ್ನ ವಿನಮ್ರತೆಯನ್ನು ವ್ಯಕ್ತಪಡಿಸುತ್ತದೆ. | أَوَلَمْ يَرَوْا۟ إِلَىٰ مَا خَلَقَ ٱللَّهُ مِن شَىْءٍۢ يَتَفَيَّؤُا۟ ظِلَٰلُهُۥ عَنِ ٱلْيَمِينِ وَٱلشَّمَآئِلِ سُجَّدًۭا لِّلَّهِ وَهُمْ دَٰخِرُونَ. ﴿48﴾ |
| 49 ಭೂಮ್ಯಾಕಾಶಗಳಲ್ಲಿರುವ ಎಲ್ಲಾ ಜೀವರಾಶಿಗಳು ಮತ್ತು ಎಲ್ಲಾ ದೇವದೂತರುಗಳು ಅಲ್ಲಾಹನಿಗೆ ಸಾಷ್ಟಾಂಗ ಮಾಡುತ್ತಾರೆ. ಅವರು ಅಹಂಕಾರ ತೋರುವುದಿಲ್ಲ. | وَلِلَّهِ يَسْجُدُ مَا فِى ٱلسَّمَٰوَٰتِ وَمَا فِى ٱلْأَرْضِ مِن دَآبَّةٍۢ وَٱلْمَلَٰٓئِكَةُ وَهُمْ لَا يَسْتَكْبِرُونَ. ﴿49﴾ |
| 50 ಅವರು (ದೇವದೂತರು) ತಮ್ಮ ಮೇಲ್ಭಾಗದಲ್ಲಿರುವ ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಭಯಪಡುತ್ತಾರೆ. ಅವರಿಗೆ ಆದೇಶಿಸಲಾಗುವುದನ್ನು ನಿರ್ವಹಿಸುತ್ತಾರೆ. | يَخَافُونَ رَبَّهُم مِّن فَوْقِهِمْ وَيَفْعَلُونَ مَا يُؤْمَرُونَ ۩. ﴿50﴾ |
| 51 ಅಲ್ಲಾಹು ಹೇಳಿದನು: “ನೀವು ಎರಡು ದೇವರುಗಳನ್ನು ಸ್ವೀಕರಿಸಬೇಡಿ. ಏಕೈಕ ದೇವನು ಅವನು (ಅಲ್ಲಾಹು) ಮಾತ್ರ. ಆದ್ದರಿಂದ ನೀವು ನನ್ನನ್ನು ಮಾತ್ರ ಭಯಪಡಿರಿ.” | ۞ وَقَالَ ٱللَّهُ لَا تَتَّخِذُوٓا۟ إِلَٰهَيْنِ ٱثْنَيْنِ ۖ إِنَّمَا هُوَ إِلَٰهٌۭ وَٰحِدٌۭ ۖ فَإِيَّٰىَ فَٱرْهَبُونِ. ﴿51﴾ |
| 52 ಭೂಮ್ಯಾಕಾಶಗಳಲ್ಲಿರುವ ಎಲ್ಲವೂ ಅವನಿಗೆ ಸೇರಿದ್ದು. ಆರಾಧನೆ ಅವನಿಗೆ ಮಾತ್ರ ಸಲ್ಲತಕ್ಕದ್ದು. ಆದರೂ ನೀವು ಅಲ್ಲಾಹನನ್ನು ಬಿಟ್ಟು ಬೇರೆ ದೇವರುಗಳನ್ನು ಭಯಪಡುತ್ತೀರಾ? | وَلَهُۥ مَا فِى ٱلسَّمَٰوَٰتِ وَٱلْأَرْضِ وَلَهُ ٱلدِّينُ وَاصِبًا ۚ أَفَغَيْرَ ٱللَّهِ تَتَّقُونَ. ﴿52﴾ |
| 53 ನಿಮ್ಮಲ್ಲಿ ಬಳಿ ಯಾವುದೇ ಅನುಗ್ರಹಗಳಿದ್ದರೂ ಅದು ಅಲ್ಲಾಹು ನೀಡಿದ್ದಾಗಿದೆ. ನಂತರ ನಿಮಗೇನಾದರೂ ತೊಂದರೆ ಸಂಭವಿಸಿದರೆ ನೀವು ಅವನಲ್ಲೇ ಮೊರೆಯಿಡುತ್ತೀರಿ. | وَمَا بِكُم مِّن نِّعْمَةٍۢ فَمِنَ ٱللَّهِ ۖ ثُمَّ إِذَا مَسَّكُمُ ٱلضُّرُّ فَإِلَيْهِ تَجْـَٔرُونَ. ﴿53﴾ |
| 54 ನಂತರ ಅವನು ನಿಮ್ಮಿಂದ ಆ ತೊಂದರೆಯನ್ನು ನಿವಾರಿಸಿದರೆ, ಅಗೋ ನಿಮ್ಮಲ್ಲೊಂದು ಗುಂಪು ತಮ್ಮ ಪರಿಪಾಲಕನೊಡನೆ (ಅಲ್ಲಾಹನೊಡನೆ) ಸಹಭಾಗಿತ್ವ (ಶಿರ್ಕ್) ಮಾಡುತ್ತಾರೆ. | ثُمَّ إِذَا كَشَفَ ٱلضُّرَّ عَنكُمْ إِذَا فَرِيقٌۭ مِّنكُم بِرَبِّهِمْ يُشْرِكُونَ. ﴿54﴾ |
| 55 ನಾವು ಅವರಿಗೆ ದಯಪಾಲಿಸಿದ ಅನುಗ್ರಹಗಳನ್ನು ಅವರು ನಿಷೇಧಿಸುತ್ತಾರೆ. ನೀವು ಆನಂದಿಸಿ. ಸದ್ಯವೇ ನೀವು ತಿಳಿಯುವಿರಿ. | لِيَكْفُرُوا۟ بِمَآ ءَاتَيْنَٰهُمْ ۚ فَتَمَتَّعُوا۟ ۖ فَسَوْفَ تَعْلَمُونَ. ﴿55﴾ |
|
56
ನಾವು ಅವರಿಗೆ ಒದಗಿಸಿರುವುದರಲ್ಲಿ ಒಂದಂಶವನ್ನು ಅವರು ಅವರಿಗೆ ಯಾವುದೇ ಪರಿಚಯವಿಲ್ಲದ ದೇವರುಗಳಿಗೆ ಮೀಸಲಿಡುತ್ತಾರೆ.[1] ಅಲ್ಲಾಹನಾಣೆ! ನಿಮ್ಮ ಈ ಸುಳ್ಳಾರೋಪಗಳ ಬಗ್ಗೆ ನಿಮ್ಮೊಡನೆ ಖಂಡಿತ ಪ್ರಶ್ನಿಸಲಾಗುವುದು.
[1] ಅವರು ದೇವರುಗಳೆಂದು ಆರಾಧಿಸುತ್ತಿರುವುದು ಒಂದೋ ವಿಗ್ರಹಗಳು, ಅಥವಾ ಜಿನ್ನ್ಗಳು ಅಥವಾ ಪಿಶಾಚಿಗಳನ್ನಾಗಿದೆ. ಅವರ ನಿಜಸ್ಥಿತಿಯೇನೆಂದು ಆರಾಧಿಸುವವರಿಗೆ ತಿಳಿದಿಲ್ಲ. ಅದೇ ರೀತಿ ಸಮಾಧಿಯಲ್ಲಿರುವ ಮಹಾಪುರುಷರನ್ನು ಆರಾಧಿಸುವವರು ಕೂಡ. ಅವರು ನಿಜವಾಗಿಯೂ ದೇವರುಗಳೇ? ಅವರು ಪ್ರಾರ್ಥಿಸಲು ಅರ್ಹರೇ? ಪ್ರಾರ್ಥಿಸಿದರೆ ಅವರು ಉತ್ತರ ನೀಡುತ್ತಾರೆಯೇ? ಮುಂತಾದ ಯಾವುದೂ ಆರಾಧಿಸುವವರಿಗೆ ಸ್ಪಷ್ಟವಾಗಿ ತಿಳಿದಿಲ್ಲ. ಯಾವುದೇ ಸ್ಪಷ್ಟ ಆಧಾರವಿಲ್ಲದಿದ್ದರೂ ಅವರು ಅಲ್ಲಾಹನನ್ನು ಬಿಟ್ಟು ಆ ದೇವರುಗಳನ್ನು ಆರಾಧಿಸುತ್ತಾರೆ. ಅಲ್ಲಾಹು ಒದಗಿಸಿದ ಧನವನ್ನು ಆ ದೇವರುಗಳಿಗೆ ಕಾಣಿಕೆ ಹಾಕುತ್ತಾರೆ ಮತ್ತು ಅವರ ಮೇಲೆ ಹರಕೆ ಹೊರುತ್ತಾರೆ.
|
وَيَجْعَلُونَ لِمَا لَا يَعْلَمُونَ نَصِيبًۭا مِّمَّا رَزَقْنَٰهُمْ ۗ تَٱللَّهِ لَتُسْـَٔلُنَّ عَمَّا كُنتُمْ تَفْتَرُونَ. ﴿56﴾ |
| 57 ಅವರು ಅಲ್ಲಾಹನಿಗೆ ಹೆಣ್ಣು ಮಕ್ಕಳಿದ್ದಾರೆಂದು ಆರೋಪಿಸುತ್ತಾರೆ. ಅಲ್ಲಾಹು ಪರಿಶುದ್ಧನು! ಆದರೆ ಅವರಿಗೆ ಅವರು ಬಯಸುವುದನ್ನೇ (ಗಂಡು ಮಕ್ಕಳನ್ನು) ಇಟ್ಟುಕೊಂಡಿದ್ದಾರೆ. | وَيَجْعَلُونَ لِلَّهِ ٱلْبَنَٰتِ سُبْحَٰنَهُۥ ۙ وَلَهُم مَّا يَشْتَهُونَ. ﴿57﴾ |
| 58 ಅವರಲ್ಲೊಬ್ಬನಿಗೆ ಒಂದು ಹೆಣ್ಣು ಮಗುವಿನ ಜನನದ ಬಗ್ಗೆ ಶುಭ ಸುದ್ದಿಯನ್ನು ತಿಳಿಸಲಾದರೆ, ಅವನ ಮುಖವು ಕಪ್ಪಿಡುತ್ತದೆ ಮತ್ತು (ಹೃದಯದಲ್ಲಿ) ರೋಷ ಉಕ್ಕುತ್ತದೆ. | وَإِذَا بُشِّرَ أَحَدُهُم بِٱلْأُنثَىٰ ظَلَّ وَجْهُهُۥ مُسْوَدًّۭا وَهُوَ كَظِيمٌۭ. ﴿58﴾ |
|
59
ಆ ಕೆಟ್ಟ ವಾರ್ತೆಯ ಕಾರಣದಿಂದಾಗಿ ಅವನು ಜನರಿಂದ ಅಡಗುತ್ತಾನೆ. ಆ ಮಗುವನ್ನು ಸಾಕಬೇಕೋ ಅಥವಾ ಮಣ್ಣಿನಲ್ಲಿ ದಫನ ಮಾಡಬೇಕೋ? ಎಂದು ಅವನು ಯೋಚಿಸುತ್ತಾನೆ. ಅವರು ಮಾಡುವ ತೀರ್ಮಾನವು ಬಹಳ ನಿಕೃಷ್ಟವಾಗಿದೆ.[1]
[1] ಮಕ್ಕಾದ ಬಹುದೇವಾರಾಧಕರಿಗೆ ಒಂದು ಹೆಣ್ಣು ಮಗು ಹುಟ್ಟಿದರೆ ಅವರು ಅದನ್ನು ಅನಿಷ್ಟವೆಂದು ಪರಿಗಣಿಸಿ ಜೀವಂತ ಹೂಳುತ್ತಾರೆ. ಹೆಣ್ಣು ಮಗು ಎಂಬ ಕಳಂಕವನ್ನು ಜೀವನವಿಡೀ ಹೊತ್ತುಕೊಂಡು ಆ ಮಗುವನ್ನು ಸಾಕಲು ಅವರು ಸಿದ್ಧರಿಲ್ಲ. ಆದರೆ ಅದೇ ಬಹುದೇವಾರಾಧಕರು ದೇವದೂತರುಗಳನ್ನು ಅಲ್ಲಾಹನ ಹೆಣ್ಣು ಮಕ್ಕಳೆಂದು ಆರೋಪಿಸುತ್ತಾರೆ. ಆಗ ಅವರಿಗೆ ಅದು ಕಳಂಕವೆಂದು ತೋರುವುದಿಲ್ಲ.
|
يَتَوَٰرَىٰ مِنَ ٱلْقَوْمِ مِن سُوٓءِ مَا بُشِّرَ بِهِۦٓ ۚ أَيُمْسِكُهُۥ عَلَىٰ هُونٍ أَمْ يَدُسُّهُۥ فِى ٱلتُّرَابِ ۗ أَلَا سَآءَ مَا يَحْكُمُونَ. ﴿59﴾ |
| 60 ಪರಲೋಕದಲ್ಲಿ ವಿಶ್ವಾಸವಿಡದವರಿಗೆ ಕೆಟ್ಟ ವಿಶೇಷಣವಿದೆ. ಅಲ್ಲಾಹನಿಗೆ ಅತ್ಯುನ್ನತ ವಿಶೇಷಣವಿದೆ. ಅವನು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ. | لِلَّذِينَ لَا يُؤْمِنُونَ بِٱلْءَاخِرَةِ مَثَلُ ٱلسَّوْءِ ۖ وَلِلَّهِ ٱلْمَثَلُ ٱلْأَعْلَىٰ ۚ وَهُوَ ٱلْعَزِيزُ ٱلْحَكِيمُ. ﴿60﴾ |
| 61 ಅಲ್ಲಾಹು ಮನುಷ್ಯರನ್ನು ಅವರು ಮಾಡಿದ ಅಕ್ರಮಗಳ ಕಾರಣದಿಂದ ಹಿಡಿದು ಶಿಕ್ಷಿಸುವುದಾದರೆ, ಭೂಮಿಯಲ್ಲಿ ಒಂದೇ ಒಂದು ಜೀವಿಯೂ ಉಳಿಯುತ್ತಿರಲಿಲ್ಲ. ಆದರೆ ಅವನು ಒಂದು ನಿಗದಿತ ಅವಧಿಯವರೆಗೆ ಅವರಿಗೆ ಕಾಲಾವಕಾಶ ನೀಡುತ್ತಾನೆ. ಅವರ ಅವಧಿಯೇನಾದರೂ ಬಂದುಬಿಟ್ಟರೆ ಆ ಅವಧಿಯಿಂದ ಒಂದು ಕ್ಷಣ ಹಿಂದೆ ಉಳಿಯಲು ಅಥವಾ ಒಂದು ಕ್ಷಣ ಮುಂದಕ್ಕೆ ಹೋಗಲು ಅವರಿಗೆ ಸಾಧ್ಯವಿಲ್ಲ. | وَلَوْ يُؤَاخِذُ ٱللَّهُ ٱلنَّاسَ بِظُلْمِهِم مَّا تَرَكَ عَلَيْهَا مِن دَآبَّةٍۢ وَلَٰكِن يُؤَخِّرُهُمْ إِلَىٰٓ أَجَلٍۢ مُّسَمًّۭى ۖ فَإِذَا جَآءَ أَجَلُهُمْ لَا يَسْتَـْٔخِرُونَ سَاعَةًۭ ۖ وَلَا يَسْتَقْدِمُونَ. ﴿61﴾ |
| 62 ಅವರಿಗೆ ಇಷ್ಟವಿಲ್ಲದ ವಸ್ತುಗಳನ್ನು ಅವರು ಅಲ್ಲಾಹನಿಗೆ ಅರೋಪಿಸುತ್ತಾರೆ. ಅತ್ಯುತ್ತಮವಾದುದೆಲ್ಲವೂ ಅವರಿಗೆಂದು ಅವರ ನಾಲಗೆಗಳು ಸುಳ್ಳು ಸುಳ್ಳಾಗಿ ಬಣ್ಣಿಸುತ್ತವೆ. ಸಂಶಯವೇ ಇಲ್ಲ! ನಿಶ್ಚಯವಾಗಿಯೂ ನರಕಾಗ್ನಿಯಿರುವುದು ಅವರಿಗೇ ಆಗಿದೆ. ಅವರು (ನರಕವಾಸಿಗಳ) ಮುಂಭಾಗದಲ್ಲಿರುವರು. | وَيَجْعَلُونَ لِلَّهِ مَا يَكْرَهُونَ وَتَصِفُ أَلْسِنَتُهُمُ ٱلْكَذِبَ أَنَّ لَهُمُ ٱلْحُسْنَىٰ ۖ لَا جَرَمَ أَنَّ لَهُمُ ٱلنَّارَ وَأَنَّهُم مُّفْرَطُونَ. ﴿62﴾ |
| 63 ಅಲ್ಲಾಹನಾಣೆ! ನಿಮಗಿಂತ ಮೊದಲು ನಾವು ಅನೇಕ ಸಮುದಾಯಗಳಿಗೆ ಸಂದೇಶವಾಹಕರನ್ನು ಕಳುಹಿಸಿದ್ದೇವೆ. ಆದರೆ ಶೈತಾನನು ಅವರಿಗೆ ಅವರ ದುಷ್ಕರ್ಮಗಳನ್ನು ಅಂದಗೊಳಿಸಿ ತೋರಿಸಿದನು. ಇಂದು ಕೂಡ ಅವನು ಅವರ ಮಿತ್ರನೇ ಆಗಿದ್ದಾನೆ. ಅವರಿಗೆ ಯಾತನಾಮಯ ಶಿಕ್ಷೆಯಿದೆ. | تَٱللَّهِ لَقَدْ أَرْسَلْنَآ إِلَىٰٓ أُمَمٍۢ مِّن قَبْلِكَ فَزَيَّنَ لَهُمُ ٱلشَّيْطَٰنُ أَعْمَٰلَهُمْ فَهُوَ وَلِيُّهُمُ ٱلْيَوْمَ وَلَهُمْ عَذَابٌ أَلِيمٌۭ. ﴿63﴾ |
| 64 (ಪ್ರವಾದಿಯವರೇ) ಯಾವ ವಿಷಯದಲ್ಲಿ ಅವರು ಭಿನ್ನಮತ ತಳೆದರೋ ಅದನ್ನು ಅವರಿಗೆ ಸ್ಪಷ್ಟವಾಗಿ ವಿವರಿಸಿಕೊಡಲು ನಾವು ನಿಮಗೆ ಈ ಗ್ರಂಥವನ್ನು ಅವತೀರ್ಣಗೊಳಿಸಿದ್ದೇವೆ. ಇದು ವಿಶ್ವಾಸವಿಡುವ ಜನರಿಗೆ ಸನ್ಮಾರ್ಗ ಮತ್ತು ದಯೆಯಾಗಿದೆ. | وَمَآ أَنزَلْنَا عَلَيْكَ ٱلْكِتَٰبَ إِلَّا لِتُبَيِّنَ لَهُمُ ٱلَّذِى ٱخْتَلَفُوا۟ فِيهِ ۙ وَهُدًۭى وَرَحْمَةًۭ لِّقَوْمٍۢ يُؤْمِنُونَ. ﴿64﴾ |
| 65 ಅಲ್ಲಾಹು ಆಕಾಶದಿಂದ ಮಳೆಯನ್ನು ಸುರಿಸಿದನು. ನಂತರ ಅದರಿಂದ ನಿರ್ಜೀವವಾಗಿದ್ದ ಭೂಮಿಗೆ ಜೀವವನ್ನು ನೀಡಿದನು. ನಿಶ್ಚಯವಾಗಿಯೂ ಕಿವಿಗೊಡುವ ಜನರಿಗೆ ಅದರಲ್ಲಿ ದೃಷ್ಟಾಂತವಿದೆ. | وَٱللَّهُ أَنزَلَ مِنَ ٱلسَّمَآءِ مَآءًۭ فَأَحْيَا بِهِ ٱلْأَرْضَ بَعْدَ مَوْتِهَآ ۚ إِنَّ فِى ذَٰلِكَ لَءَايَةًۭ لِّقَوْمٍۢ يَسْمَعُونَ. ﴿65﴾ |
| 66 ನಿಶ್ಚಯವಾಗಿಯೂ ನಿಮಗೆ ಜಾನುವಾರುಗಳಲ್ಲಿ ನೀತಿಪಾಠವಿದೆ. ಅವುಗಳ ಉದರಗಳಲ್ಲಿ ಏನಿದೆಯೋ ಅದರಿಂದ—ಸೆಗಣಿ ಮತ್ತು ರಕ್ತದ ನಡುವಿನಿಂದ—ನಾವು ನಿಮಗೆ ಶುದ್ಧ ಹಾಲನ್ನು ಕುಡಿಯಲು ನೀಡುತ್ತೇವೆ. ಅದು ಕುಡಿಯುವವರಿಗಂತೂ ಬಹಳ ರುಚಿಕರವಾಗಿದೆ. | وَإِنَّ لَكُمْ فِى ٱلْأَنْعَٰمِ لَعِبْرَةًۭ ۖ نُّسْقِيكُم مِّمَّا فِى بُطُونِهِۦ مِنۢ بَيْنِ فَرْثٍۢ وَدَمٍۢ لَّبَنًا خَالِصًۭا سَآئِغًۭا لِّلشَّٰرِبِينَ. ﴿66﴾ |
|
67
ಖರ್ಜೂರದ ಮರಗಳ ಮತ್ತು ದ್ರಾಕ್ಷಿ ಬಳ್ಳಿಗಳ ಹಣ್ಣುಗಳಿಂದಲೂ ನೀವು ಶರಾಬನ್ನು ಮತ್ತು ಉತ್ತಮ ಆಹಾರಗಳನ್ನು ತಯಾರಿಸುತ್ತೀರಿ.[1] ನಿಶ್ಚಯವಾಗಿಯೂ ಅರ್ಥಮಾಡಿಕೊಳ್ಳುವ ಜನರಿಗೆ ಅದರಲ್ಲಿ ದೃಷ್ಟಾಂತವಿದೆ.
[1] ಈ ವಚನವು ಅವತೀರ್ಣವಾಗುವಾಗ ಶರಾಬನ್ನು ನಿಷೇಧಿಸಲಾಗಿರಲಿಲ್ಲ. ಆದರೂ ಈ ವಚನದಲ್ಲಿ ಶರಾಬು ಎಂದು ಹೇಳಿದ ಬಳಿಕ ಉತ್ತಮ ಆಹಾರ ಎಂಬ ಉಲ್ಲೇಖವಿದೆ. ಶರಾಬು ಉತ್ತಮ ಆಹಾರವಲ್ಲ ಎಂದು ಇದರಿಂದ ತಿಳಿಯಬಹುದು.
|
وَمِن ثَمَرَٰتِ ٱلنَّخِيلِ وَٱلْأَعْنَٰبِ تَتَّخِذُونَ مِنْهُ سَكَرًۭا وَرِزْقًا حَسَنًا ۗ إِنَّ فِى ذَٰلِكَ لَءَايَةًۭ لِّقَوْمٍۢ يَعْقِلُونَ. ﴿67﴾ |
| 68 ನಿಮ್ಮ ಪರಿಪಾಲಕನು (ಅಲ್ಲಾಹು) ಜೇನುನೊಣಕ್ಕೆ ಸಂದೇಶವನ್ನು ನೀಡಿದನು: “ಬೆಟ್ಟಗಳಲ್ಲಿ, ಮರಗಳಲ್ಲಿ ಮತ್ತು ಮನುಷ್ಯರು ನಿರ್ಮಿಸಿದ ಎತ್ತರದ ಕಟ್ಟಡಗಳಲ್ಲಿ ಗೂಡುಗಳನ್ನು ನಿರ್ಮಿಸು. | وَأَوْحَىٰ رَبُّكَ إِلَى ٱلنَّحْلِ أَنِ ٱتَّخِذِى مِنَ ٱلْجِبَالِ بُيُوتًۭا وَمِنَ ٱلشَّجَرِ وَمِمَّا يَعْرِشُونَ. ﴿68﴾ |
| 69 ನಂತರ ಎಲ್ಲ ರೀತಿಯ ಹಣ್ಣುಗಳನ್ನು ತಿಂದು, ನಿನ್ನ ಪರಿಪಾಲಕನು (ಅಲ್ಲಾಹು) ಸುಲಭಗೊಳಿಸಿದ ಮಾರ್ಗಗಳಲ್ಲಿ ಸಂಚರಿಸು.” ಅವುಗಳ ಉದರಗಳಿಂದ ವಿಭಿನ್ನ ರಂಗುಗಳ ಪಾನೀಯವು ಹೊರಬರುತ್ತದೆ. ಅದರಲ್ಲಿ ಮನುಷ್ಯರಿಗೆ ಉಪಶಮನವಿದೆ. ನಿಶ್ಚಯವಾಗಿಯೂ ಯೋಚಿಸುವ ಜನರಿಗೆ ಅದರಲ್ಲಿ ದೃಷ್ಟಾಂತವಿದೆ. | ثُمَّ كُلِى مِن كُلِّ ٱلثَّمَرَٰتِ فَٱسْلُكِى سُبُلَ رَبِّكِ ذُلُلًۭا ۚ يَخْرُجُ مِنۢ بُطُونِهَا شَرَابٌۭ مُّخْتَلِفٌ أَلْوَٰنُهُۥ فِيهِ شِفَآءٌۭ لِّلنَّاسِ ۗ إِنَّ فِى ذَٰلِكَ لَءَايَةًۭ لِّقَوْمٍۢ يَتَفَكَّرُونَ. ﴿69﴾ |
| 70 ಅಲ್ಲಾಹು ನಿಮ್ಮನ್ನು ಸೃಷ್ಟಿಸಿದನು. ನಂತರ ನಿಮ್ಮನ್ನು ಅವನು ಮೃತಪಡಿಸುವನು. ನಿಮ್ಮಲ್ಲಿ ಕೆಲವರನ್ನು—ಅವರು ಅನೇಕ ವಿಷಯಗಳನ್ನು ತಿಳಿದುಕೊಂಡ ಬಳಿಕವೂ ಏನೂ ತಿಳಿಯದ ಅವಸ್ಥೆಗೆ ತಲುಪುವ ರೀತಿಯಲ್ಲಿ ಹಣ್ಣು ಹಣ್ಣು ಮುದುಕರಾಗುವ ಪ್ರಾಯಕ್ಕೆ ಮರಳಿಸಲಾಗುವರು. ನಿಶ್ಚಯವಾಗಿಯೂ ಅಲ್ಲಾಹು ಸರ್ವಜ್ಞನು ಮತ್ತು ಸರ್ವಶಕ್ತನಾಗಿದ್ದಾನೆ. | وَٱللَّهُ خَلَقَكُمْ ثُمَّ يَتَوَفَّىٰكُمْ ۚ وَمِنكُم مَّن يُرَدُّ إِلَىٰٓ أَرْذَلِ ٱلْعُمُرِ لِكَىْ لَا يَعْلَمَ بَعْدَ عِلْمٍۢ شَيْـًٔا ۚ إِنَّ ٱللَّهَ عَلِيمٌۭ قَدِيرٌۭ. ﴿70﴾ |
|
71
ಅಲ್ಲಾಹು ನಿಮ್ಮಲ್ಲಿ ಕೆಲವರಿಗೆ ಇತರ ಕೆಲವರಿಗಿಂತಲೂ ಹೆಚ್ಚು ಉಪಜೀವನವನ್ನು ನೀಡಿದ್ದಾನೆ. ಹೆಚ್ಚು ಉಪಜೀವನ ನೀಡಲಾದವರು ಅದನ್ನು ತಮ್ಮ ಅಧೀನದಲ್ಲಿರುವ ಗುಲಾಮರಿಗೆ ನೀಡಿ ಅದರಲ್ಲಿ ಇಬ್ಬರೂ (ಗುಲಾಮ ಮತ್ತು ಯಜಮಾನ) ಸಮಾನರಾಗುವಂತೆ ಮಾಡಿಕೊಳ್ಳುವುದಿಲ್ಲ.[1] ಹಾಗಿದ್ದೂ ಅವರು ಅಲ್ಲಾಹನ ಅನುಗ್ರಹಗಳನ್ನು ನಿಷೇಧಿಸುತ್ತಾರೆಯೇ?
[1] ನಿಮ್ಮ ಅಧೀನದಲ್ಲಿರುವ ಗುಲಾಮರಿಗಿಂತಲೂ ಹೆಚ್ಚು ಆಸ್ತಿಪಾಸ್ತಿ ನಿಮ್ಮಲ್ಲಿದೆ. ಆದರೂ ನೀವು ನಿಮ್ಮಲ್ಲಿರುವ ಆಸ್ತಿಯನ್ನು ಅವರಿಗೂ ಹಂಚಿ ನೀವಿಬ್ಬರೂ ಆಸ್ತಿಯಲ್ಲಿ ಸಮಾನರಾಗುವಂತೆ ಮಾಡುವುದಿಲ್ಲ. ಆದರೆ ನೀವು ಅಲ್ಲಾಹನ ದಾಸರನ್ನು ಅವನಿಗೆ ಸಹಭಾಗಿಯಾಗಿ ಮಾಡಿ ಅವರು ಅಲ್ಲಾಹನಿಗೆ ಸಮಾನರಾಗಿದ್ದಾರೆ ಮತ್ತು ಅಲ್ಲಾಹು ಅವರಿಗೆ ಅವನ ಅಧಿಕಾರವನ್ನು ಹಂಚಿದ್ದಾನೆಂದು ಹೇಳುತ್ತೀರಿ.
|
وَٱللَّهُ فَضَّلَ بَعْضَكُمْ عَلَىٰ بَعْضٍۢ فِى ٱلرِّزْقِ ۚ فَمَا ٱلَّذِينَ فُضِّلُوا۟ بِرَآدِّى رِزْقِهِمْ عَلَىٰ مَا مَلَكَتْ أَيْمَٰنُهُمْ فَهُمْ فِيهِ سَوَآءٌ ۚ أَفَبِنِعْمَةِ ٱللَّهِ يَجْحَدُونَ. ﴿71﴾ |
| 72 ಅಲ್ಲಾಹು ನಿಮ್ಮಿಂದಲೇ ನಿಮಗೆ ಪತ್ನಿಯರನ್ನು ಮಾಡಿಕೊಟ್ಟನು. ನಿಮ್ಮ ಪತ್ನಿಯರ ಮೂಲಕ ನಿಮಗೆ ಮಕ್ಕಳು ಮೊಮ್ಮಕ್ಕಳನ್ನು ಮಾಡಿಕೊಟ್ಟನು. ಉತ್ತಮ ವಸ್ತುಗಳನ್ನು ನಿಮಗೆ ಆಹಾರವಾಗಿ ನೀಡಿದನು. ಹೀಗಿದ್ದೂ ಅವರು ಅಸತ್ಯದಲ್ಲಿ ನಂಬಿಕೆಯಿಟ್ಟು ಅಲ್ಲಾಹನ ಸವಲತ್ತುಗಳನ್ನು ನಿಷೇಧಿಸುತ್ತಾರೆಯೇ? | وَٱللَّهُ جَعَلَ لَكُم مِّنْ أَنفُسِكُمْ أَزْوَٰجًۭا وَجَعَلَ لَكُم مِّنْ أَزْوَٰجِكُم بَنِينَ وَحَفَدَةًۭ وَرَزَقَكُم مِّنَ ٱلطَّيِّبَٰتِ ۚ أَفَبِٱلْبَٰطِلِ يُؤْمِنُونَ وَبِنِعْمَتِ ٱللَّهِ هُمْ يَكْفُرُونَ. ﴿72﴾ |
| 73 ಅವರು ಅಲ್ಲಾಹನನ್ನು ಬಿಟ್ಟು ಭೂಮ್ಯಾಕಾಶಗಳಲ್ಲಿ ಅವರಿಗೆ ಯಾವುದೇ ಉಪಜೀವನ ಮಾರ್ಗಗಳನ್ನು ಮಾಡಿಕೊಡದವರನ್ನು ಮತ್ತು ಯಾವುದೇ ಸಾಮರ್ಥ್ಯವಿಲ್ಲದವರನ್ನು ಆರಾಧಿಸುತ್ತಿದ್ದಾರೆ. | وَيَعْبُدُونَ مِن دُونِ ٱللَّهِ مَا لَا يَمْلِكُ لَهُمْ رِزْقًۭا مِّنَ ٱلسَّمَٰوَٰتِ وَٱلْأَرْضِ شَيْـًۭٔا وَلَا يَسْتَطِيعُونَ. ﴿73﴾ |
| 74 ಆದ್ದರಿಂದ ನೀವು ಅಲ್ಲಾಹನಿಗೆ ಉದಾಹರಣೆಗಳನ್ನು ಕೊಡಲು ಹೋಗಬೇಡಿ. ನಿಶ್ಚಯವಾಗಿಯೂ ಅಲ್ಲಾಹನಿಗೆ ತಿಳಿದಿದೆ. ಆದರೆ ನಿಮಗೆ ತಿಳಿದಿಲ್ಲ. | فَلَا تَضْرِبُوا۟ لِلَّهِ ٱلْأَمْثَالَ ۚ إِنَّ ٱللَّهَ يَعْلَمُ وَأَنتُمْ لَا تَعْلَمُونَ. ﴿74﴾ |
|
75
ಅಲ್ಲಾಹು ಒಂದು ಉದಾಹರಣೆಯನ್ನು ಕೊಡುತ್ತಾನೆ. ಇನ್ನೊಬ್ಬನ ಅಧೀನದಲ್ಲಿರುವ ಒಬ್ಬ ಗುಲಾಮ. ಅವನಿಗೆ (ಸ್ವಯಂ) ಏನೂ ಮಾಡುವ ಸಾಮರ್ಥ್ಯವಿಲ್ಲ. ಅದೇ ರೀತಿ, ನಾವು ಅತ್ಯುತ್ತಮ ಉಪಜೀವನವನ್ನು ದಯಪಾಲಿಸಿದ ಇನ್ನೊಬ್ಬ ವ್ಯಕ್ತಿ. ಅವನು ಅದರಿಂದ ರಹಸ್ಯವಾಗಿಯೂ ಬಹಿರಂಗವಾಗಿಯೂ ಖರ್ಚು ಮಾಡುತ್ತಾನೆ. ಇವರು ಸಮಾನರಾಗುವರೇ?[1] ಅಲ್ಲಾಹನಿಗೆ ಸರ್ವಸ್ತುತಿ. ವಾಸ್ತವವಾಗಿ, ಅವರಲ್ಲಿ ಹೆಚ್ಚಿನವರೂ ತಿಳಿಯುವುದಿಲ್ಲ.
[1] ಮೊದಲನೆಯವನು ಒಬ್ಬ ಗುಲಾಮ ಮತ್ತು ಎರಡನೆಯವನು ಸ್ವತಂತ್ರ ವ್ಯಕ್ತಿ. ಇವರಿಬ್ಬರೂ ಮನುಷ್ಯರು. ಇವರು ಅನೇಕ ಗುಣಗಳನ್ನು ಸಮಾನವಾಗಿ ಹಂಚಿಕೊಳ್ಳುತ್ತಾರೆ. ಆದರೂ ನೀವು ಇವರಿಬ್ಬರನ್ನು ಸಮಾನರೆಂದು ಪರಿಗಣಿಸುವುದಿಲ್ಲ. ಹೀಗಿರುವಾಗ ನಿಮ್ಮ ದೇವರುಗಳನ್ನು ಅಥವಾ ಸಮಾಧಿಯಲ್ಲಿರುವ ಮಹಾಪುರುಷರನ್ನು ನೀವು ಅಲ್ಲಾಹನಿಗೆ ಸಮಾನರೆಂದು ಹೇಗೆ ಕಲ್ಪಿಸಿಕೊಳ್ಳುತ್ತೀರಿ?
|
۞ ضَرَبَ ٱللَّهُ مَثَلًا عَبْدًۭا مَّمْلُوكًۭا لَّا يَقْدِرُ عَلَىٰ شَىْءٍۢ وَمَن رَّزَقْنَٰهُ مِنَّا رِزْقًا حَسَنًۭا فَهُوَ يُنفِقُ مِنْهُ سِرًّۭا وَجَهْرًا ۖ هَلْ يَسْتَوُۥنَ ۚ ٱلْحَمْدُ لِلَّهِ ۚ بَلْ أَكْثَرُهُمْ لَا يَعْلَمُونَ. ﴿75﴾ |
| 76 ಅಲ್ಲಾಹು ಇನ್ನೊಂದು ಉದಾಹರಣೆಯನ್ನು ಕೊಡುತ್ತಾನೆ. ಇಬ್ಬರು ವ್ಯಕ್ತಿಗಳಿದ್ದು ಅವರಲ್ಲೊಬ್ಬನು ಮೂಕ. ಅವನಿಗೆ ಏನೂ ಮಾಡುವ ಸಾಮರ್ಥ್ಯವಿಲ್ಲ. ಅವನ ಯಜಮಾನನಿಗೆ ಅವನೊಂದು ಹೊರೆಯಾಗಿದ್ದಾನೆ. ಅವನನ್ನು ಎಲ್ಲಿಗೆ ಕಳುಹಿಸಿದರೂ ಅವನು ಯಾವುದೇ ಒಳಿತನ್ನು ತರುವುದಿಲ್ಲ. ಇವನು ಮತ್ತು ನೇರಮಾರ್ಗದಲ್ಲಿದ್ದು ನ್ಯಾಯವನ್ನು ಆದೇಶಿಸುವ ವ್ಯಕ್ತಿ ಸಮಾನರಾಗುವರೇ? | وَضَرَبَ ٱللَّهُ مَثَلًۭا رَّجُلَيْنِ أَحَدُهُمَآ أَبْكَمُ لَا يَقْدِرُ عَلَىٰ شَىْءٍۢ وَهُوَ كَلٌّ عَلَىٰ مَوْلَىٰهُ أَيْنَمَا يُوَجِّههُّ لَا يَأْتِ بِخَيْرٍ ۖ هَلْ يَسْتَوِى هُوَ وَمَن يَأْمُرُ بِٱلْعَدْلِ ۙ وَهُوَ عَلَىٰ صِرَٰطٍۢ مُّسْتَقِيمٍۢ. ﴿76﴾ |
| 77 ಭೂಮ್ಯಾಕಾಶಗಳ ಅದೃಶ್ಯಗಳೆಲ್ಲವೂ ಅಲ್ಲಾಹನಿಗೆ ಸೇರಿದ್ದು. ಅಂತ್ಯ ಸಮಯದ ಆಜ್ಞೆಯು ಕಣ್ಣೆವೆಯಿಕ್ಕುವಂತೆ ಅಥವಾ ಅದಕ್ಕಿಂತಲೂ ಹತ್ತಿರವಾಗಿದೆ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ. | وَلِلَّهِ غَيْبُ ٱلسَّمَٰوَٰتِ وَٱلْأَرْضِ ۚ وَمَآ أَمْرُ ٱلسَّاعَةِ إِلَّا كَلَمْحِ ٱلْبَصَرِ أَوْ هُوَ أَقْرَبُ ۚ إِنَّ ٱللَّهَ عَلَىٰ كُلِّ شَىْءٍۢ قَدِيرٌۭ. ﴿77﴾ |
| 78 ಅಲ್ಲಾಹು ನಿಮ್ಮನ್ನು ನಿಮ್ಮ ತಾಯಂದಿರ ಉದರಗಳಿಂದ ಹೊರತಂದನು. ಆಗ ನಿಮಗೆ ಏನೂ ತಿಳಿದಿರಲಿಲ್ಲ. ಅವನು ನಿಮಗೆ ಕಿವಿ, ಕಣ್ಣು ಮತ್ತು ಹೃದಯಗಳನ್ನು ನೀಡಿದನು. ನೀವು ಕೃತಜ್ಞರಾಗುವುದಕ್ಕಾಗಿ. | وَٱللَّهُ أَخْرَجَكُم مِّنۢ بُطُونِ أُمَّهَٰتِكُمْ لَا تَعْلَمُونَ شَيْـًۭٔا وَجَعَلَ لَكُمُ ٱلسَّمْعَ وَٱلْأَبْصَٰرَ وَٱلْأَفْـِٔدَةَ ۙ لَعَلَّكُمْ تَشْكُرُونَ. ﴿78﴾ |
| 79 ವಾಯುಮಂಡಲದಲ್ಲಿ ಅಲ್ಲಾಹನ ಆಜ್ಞೆಗೆ ವಿಧೇಯವಾಗಿ ಹಾರಾಡುವ ಹಕ್ಕಿಗಳನ್ನು ಅವರು ನೋಡಿಲ್ಲವೇ? ಅಲ್ಲಾಹನ ಹೊರತು ಯಾರೂ ಅವುಗಳನ್ನು ಆಧರಿಸಿ ಹಿಡಿಯುವುದಿಲ್ಲ. ನಿಶ್ಚಯವಾಗಿಯೂ ವಿಶ್ವಾಸವಿಡುವ ಜನರಿಗೆ ಇದರಲ್ಲಿ ದೃಷ್ಟಾಂತಗಳಿವೆ. | أَلَمْ يَرَوْا۟ إِلَى ٱلطَّيْرِ مُسَخَّرَٰتٍۢ فِى جَوِّ ٱلسَّمَآءِ مَا يُمْسِكُهُنَّ إِلَّا ٱللَّهُ ۗ إِنَّ فِى ذَٰلِكَ لَءَايَٰتٍۢ لِّقَوْمٍۢ يُؤْمِنُونَ. ﴿79﴾ |
| 80 ಅಲ್ಲಾಹು ನಿಮಗೆ ನಿಮ್ಮ ಮನೆಗಳಲ್ಲಿ ವಿಶ್ರಾಂತಿಯ ಸ್ಥಳವನ್ನು ಮಾಡಿಕೊಟ್ಟಿದ್ದಾನೆ. ಜಾನುವಾರುಗಳ ತೊಗಲುಗಳಿಂದಲೂ ಅವನು ನಿಮಗೆ ಮನೆಗಳನ್ನು (ಡೇರೆಗಳನ್ನು) ಮಾಡಿಕೊಟ್ಟಿದ್ದಾನೆ. ನೀವು ಪ್ರಯಾಣ ಮಾಡುವ ದಿನಗಳಲ್ಲೂ ಮತ್ತು ಬಿಡಾರ ಹೂಡುವ ದಿನಗಳಲ್ಲೂ ಅವುಗಳನ್ನು ಅನಾಯಾಸವಾಗಿ ಒಯ್ಯುತ್ತೀರಿ. ಅವುಗಳ ಉಣ್ಣೆ, ತುಪ್ಪಳ ಮತ್ತು ಕೇಶಗಳಿಂದ ನೀವು ನಿಗದಿತ ಕಾಲದವರೆಗೆ ಉಪಯೋಗಗಳನ್ನು ಮತ್ತು ಆನಂದವನ್ನು ಪಡೆಯುತ್ತೀರಿ. | وَٱللَّهُ جَعَلَ لَكُم مِّنۢ بُيُوتِكُمْ سَكَنًۭا وَجَعَلَ لَكُم مِّن جُلُودِ ٱلْأَنْعَٰمِ بُيُوتًۭا تَسْتَخِفُّونَهَا يَوْمَ ظَعْنِكُمْ وَيَوْمَ إِقَامَتِكُمْ ۙ وَمِنْ أَصْوَافِهَا وَأَوْبَارِهَا وَأَشْعَارِهَآ أَثَٰثًۭا وَمَتَٰعًا إِلَىٰ حِينٍۢ. ﴿80﴾ |
| 81 ಅಲ್ಲಾಹು ನಿಮಗೆ ಅವನು ಸೃಷ್ಟಿಸಿದ ವಸ್ತುಗಳಿಂದ ನೆರಳನ್ನು ಮಾಡಿಕೊಟ್ಟಿದ್ದಾನೆ. ಪರ್ವತಗಳಲ್ಲಿ ನಿಮಗೆ ಆಶ್ರಯದಾಣಗಳನ್ನು (ಗುಹೆಗಳನ್ನು) ಮಾಡಿಕೊಟ್ಟಿದ್ದಾನೆ. ನಿಮ್ಮನ್ನು ಸೆಕೆಯಿಂದ ರಕ್ಷಿಸುವ ಅಂಗಿಗಳನ್ನು ಮತ್ತು ಯುದ್ಧದಲ್ಲಿ (ವೈರಿಯಿಂದ) ರಕ್ಷಿಸುವ ಅಂಗಿಗಳನ್ನು ಮಾಡಿಕೊಟ್ಟಿದ್ದಾನೆ. ಈ ರೀತಿ ಅವನು ನಿಮಗೆ ತನ್ನ ಎಲ್ಲಾ ಅನುಗ್ರಹವನ್ನು ಪೂರ್ಣವಾಗಿ ಕರುಣಿಸುತ್ತಿದ್ದಾನೆ. ನೀವು ಅವನಿಗೆ ಶರಣಾಗುವುದಕ್ಕಾಗಿ. | وَٱللَّهُ جَعَلَ لَكُم مِّمَّا خَلَقَ ظِلَٰلًۭا وَجَعَلَ لَكُم مِّنَ ٱلْجِبَالِ أَكْنَٰنًۭا وَجَعَلَ لَكُمْ سَرَٰبِيلَ تَقِيكُمُ ٱلْحَرَّ وَسَرَٰبِيلَ تَقِيكُم بَأْسَكُمْ ۚ كَذَٰلِكَ يُتِمُّ نِعْمَتَهُۥ عَلَيْكُمْ لَعَلَّكُمْ تُسْلِمُونَ. ﴿81﴾ |
| 82 (ಪ್ರವಾದಿಯವರೇ) ಅವರೇನಾದರೂ ವಿಮುಖರಾದರೆ—ನಿಮ್ಮ ಕರ್ತವ್ಯವು ಸಂದೇಶವನ್ನು ಸ್ಪಷ್ಟವಾಗಿ ತಲುಪಿಸಿಕೊಡುವುದು ಮಾತ್ರ. | فَإِن تَوَلَّوْا۟ فَإِنَّمَا عَلَيْكَ ٱلْبَلَٰغُ ٱلْمُبِينُ. ﴿82﴾ |
| 83 ಅವರು ಅಲ್ಲಾಹನ ಅನುಗ್ರಹಗಳನ್ನು ಗುರುತಿಸಿದ ಬಳಿಕವೂ ಅವುಗಳನ್ನು ನಿಷೇಧಿಸುತ್ತಾರೆ. ಅವರಲ್ಲಿ ಹೆಚ್ಚಿನವರೂ ಕೃತಘ್ನರಾಗಿದ್ದಾರೆ. | يَعْرِفُونَ نِعْمَتَ ٱللَّهِ ثُمَّ يُنكِرُونَهَا وَأَكْثَرُهُمُ ٱلْكَٰفِرُونَ. ﴿83﴾ |
| 84 ನಾವು ಎಲ್ಲಾ ಸಮುದಾಯಗಳಿಂದಲೂ ಒಬ್ಬೊಬ್ಬ ಸಾಕ್ಷಿಯನ್ನು ಎಬ್ಬಿಸುವ ದಿನ. ನಂತರ ಸತ್ಯನಿಷೇಧಿಗಳಿಗೆ (ನೆಪ ಹೇಳಿ ತಪ್ಪಿಸಿಕೊಳ್ಳಲು) ಅನುಮತಿ ನೀಡಲಾಗುವುದಿಲ್ಲ. ಅವರಿಗೆ ಪಶ್ಚಾತ್ತಾಪಪಡಲು ಕೂಡ ಅವಕಾಶ ನೀಡಲಾಗುವುದಿಲ್ಲ. | وَيَوْمَ نَبْعَثُ مِن كُلِّ أُمَّةٍۢ شَهِيدًۭا ثُمَّ لَا يُؤْذَنُ لِلَّذِينَ كَفَرُوا۟ وَلَا هُمْ يُسْتَعْتَبُونَ. ﴿84﴾ |
| 85 ಅಕ್ರಮಿಗಳು ಶಿಕ್ಷೆಯನ್ನು ನೋಡುವಾಗ—ಅವರಿಗೆ ಅದರಲ್ಲಿ ರಿಯಾಯಿತಿ ನೀಡುವ ಅಥವಾ ಅವರಿಗೆ ಕಾಲಾವಕಾಶ ನೀಡುವ ವಿಷಯವೇ ಇಲ್ಲ. | وَإِذَا رَءَا ٱلَّذِينَ ظَلَمُوا۟ ٱلْعَذَابَ فَلَا يُخَفَّفُ عَنْهُمْ وَلَا هُمْ يُنظَرُونَ. ﴿85﴾ |
| 86 ಅಲ್ಲಾಹನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡಿದವರು (ಪರಲೋಕದಲ್ಲಿ) ತಾವು ಸಹಭಾಗಿಗಳನ್ನಾಗಿ ಮಾಡಿದವರನ್ನು ಕಂಡಾಗ ಹೇಳುವರು: “ನಮ್ಮ ಪರಿಪಾಲಕನೇ! ನಾವು ನಿನ್ನನ್ನು ಬಿಟ್ಟು ಕರೆದು ಪ್ರಾರ್ಥಿಸುತ್ತಿದ್ದ ಸಹಭಾಗಿಗಳು ಇವರೇ.” ಆಗ ಅವರು ಉತ್ತರಿಸುವರು: “ನೀವು ಖಂಡಿತ ಸುಳ್ಳು ಹೇಳುತ್ತಿದ್ದೀರಿ.” | وَإِذَا رَءَا ٱلَّذِينَ أَشْرَكُوا۟ شُرَكَآءَهُمْ قَالُوا۟ رَبَّنَا هَٰٓؤُلَآءِ شُرَكَآؤُنَا ٱلَّذِينَ كُنَّا نَدْعُوا۟ مِن دُونِكَ ۖ فَأَلْقَوْا۟ إِلَيْهِمُ ٱلْقَوْلَ إِنَّكُمْ لَكَٰذِبُونَ. ﴿86﴾ |
| 87 ಅಂದು ಅವರೆಲ್ಲರೂ ಅಲ್ಲಾಹನ ಮುಂದೆ ಸಂಪೂರ್ಣ ಶರಣಾಗತಿಯನ್ನು ಪ್ರಕಟಿಸುವರು. ಅವರು ಸುಳ್ಳು ಸುಳ್ಳಾಗಿ ಆರೋಪಿಸಿದ್ದೆಲ್ಲವೂ ಅವರಿಂದ ಮರೆಯಾಗುವುವು. | وَأَلْقَوْا۟ إِلَى ٱللَّهِ يَوْمَئِذٍ ٱلسَّلَمَ ۖ وَضَلَّ عَنْهُم مَّا كَانُوا۟ يَفْتَرُونَ. ﴿87﴾ |
| 88 ಸತ್ಯನಿಷೇಧಿಗಳು ಮತ್ತು ಅಲ್ಲಾಹನ ಮಾರ್ಗದಿಂದ ಜನರನ್ನು ತಡೆದವರು ಯಾರೋ—ಅವರಿಗೆ ನಾವು ಶಿಕ್ಷೆಯ ಮೇಲೆ ಶಿಕ್ಷೆಯನ್ನು ಹೆಚ್ಚಿಸುವೆವು. ಇದು ಅವರು ಮಾಡಿದ ಕಿಡಿಗೇಡಿತನದ ಪ್ರತಿಫಲವಾಗಿದೆ. | ٱلَّذِينَ كَفَرُوا۟ وَصَدُّوا۟ عَن سَبِيلِ ٱللَّهِ زِدْنَٰهُمْ عَذَابًۭا فَوْقَ ٱلْعَذَابِ بِمَا كَانُوا۟ يُفْسِدُونَ. ﴿88﴾ |
| 89 (ಪ್ರವಾದಿಯವರೇ) ನಾವು ಎಲ್ಲಾ ಸಮುದಾಯಗಳ ವಿರುದ್ಧ ಅವರಿಂದಲೇ ಒಬ್ಬ ಸಾಕ್ಷಿಯನ್ನು ನಿಲ್ಲಿಸುವ ಮತ್ತು ಇವರ ವಿರುದ್ಧ ಸಾಕ್ಷಿಯಾಗಿ ನಿಮ್ಮನ್ನು ನಿಲ್ಲಿಸುವ ದಿನ! ಎಲ್ಲಾ ವಿಷಯಗಳಿಗೂ ವಿವರಣೆ ನೀಡುವ ಈ ಗ್ರಂಥವನ್ನು ನಾವು ನಿಮಗೆ ಅವತೀರ್ಣಗೊಳಿಸಿದ್ದೇವೆ. ಇದು ಮುಸಲ್ಮಾನರಿಗೆ ಸನ್ಮಾರ್ಗದರ್ಶಿ, ದಯೆ ಮತ್ತು ಸುವಾರ್ತೆಯಾಗಿದೆ. | وَيَوْمَ نَبْعَثُ فِى كُلِّ أُمَّةٍۢ شَهِيدًا عَلَيْهِم مِّنْ أَنفُسِهِمْ ۖ وَجِئْنَا بِكَ شَهِيدًا عَلَىٰ هَٰٓؤُلَآءِ ۚ وَنَزَّلْنَا عَلَيْكَ ٱلْكِتَٰبَ تِبْيَٰنًۭا لِّكُلِّ شَىْءٍۢ وَهُدًۭى وَرَحْمَةًۭ وَبُشْرَىٰ لِلْمُسْلِمِينَ. ﴿89﴾ |
| 90 ನಿಶ್ಚಯವಾಗಿಯೂ, ಅಲ್ಲಾಹು ನ್ಯಾಯವನ್ನು, ಒಳಿತನ್ನು ಮತ್ತು ಹತ್ತಿರದ ಸಂಬಂಧಿಕರಿಗೆ (ನೆರವು) ನೀಡಲು ಆಜ್ಞಾಪಿಸುತ್ತಾನೆ. ಅಶ್ಲೀಲಕೃತ್ಯಗಳು, ದುರಾಚಾರಗಳು ಮತ್ತು ಅತಿರೇಕಗಳನ್ನು ವಿರೋಧಿಸುತ್ತಾನೆ. ನೀವು ಉಪದೇಶ ಸ್ವೀಕರಿಸುವುದಕ್ಕಾಗಿ ಅವನು ನಿಮಗೆ ಉಪದೇಶ ನೀಡುತ್ತಿದ್ದಾನೆ. | ۞ إِنَّ ٱللَّهَ يَأْمُرُ بِٱلْعَدْلِ وَٱلْإِحْسَٰنِ وَإِيتَآئِ ذِى ٱلْقُرْبَىٰ وَيَنْهَىٰ عَنِ ٱلْفَحْشَآءِ وَٱلْمُنكَرِ وَٱلْبَغْىِ ۚ يَعِظُكُمْ لَعَلَّكُمْ تَذَكَّرُونَ. ﴿90﴾ |
| 91 ನೀವು ಕರಾರು ಮಾಡಿದರೆ ಅಲ್ಲಾಹನ ಕರಾರನ್ನು ನೆರವೇರಿಸಿರಿ. ನೀವು ಆಣೆಗಳನ್ನು—ಅವುಗಳನ್ನು ಖಾತ್ರಿಪಡಿಸಿದ ನಂತರ ಮುರಿಯಲು ಹೋಗಬೇಡಿ. ನೀವಂತೂ ಅಲ್ಲಾಹನನ್ನು ನಿಮಗೆ ಜಾಮೀನಾಗಿ ನಿಲ್ಲಿಸಿದ್ದೀರಿ. ನಿಶ್ಚಯವಾಗಿಯೂ ನೀವು ಮಾಡುವ ಕರ್ಮಗಳನ್ನು ಅಲ್ಲಾಹು ತಿಳಿಯುತ್ತಾನೆ. | وَأَوْفُوا۟ بِعَهْدِ ٱللَّهِ إِذَا عَٰهَدتُّمْ وَلَا تَنقُضُوا۟ ٱلْأَيْمَٰنَ بَعْدَ تَوْكِيدِهَا وَقَدْ جَعَلْتُمُ ٱللَّهَ عَلَيْكُمْ كَفِيلًا ۚ إِنَّ ٱللَّهَ يَعْلَمُ مَا تَفْعَلُونَ. ﴿91﴾ |
|
92
ನೂಲನ್ನು ಗಟ್ಟಿಯಾಗಿ ಸುತ್ತಿದ ಬಳಿಕ ಅದನ್ನು ಎಳೆ ಎಳೆಯಾಗಿ ಬಿಡಿಸಿ ಎಸೆಯುವ ಮಹಿಳೆಯಂತೆ ನೀವಾಗಬೇಡಿ—ನಿಮ್ಮಲ್ಲೊಂದು ಗುಂಪು ಇನ್ನೊಂದು ಗುಂಪಿಗಿಂತ ಹೆಚ್ಚಾಗಿರುವ ಕಾರಣ ನೀವು ನಿಮ್ಮ ಆಣೆಗಳನ್ನು (ಕರಾರುಗಳನ್ನು) ಪರಸ್ಪರ ವಂಚನೆಯ ಮಾರ್ಗವಾಗಿ ಮಾಡುತ್ತಿದ್ದೀರಿ.[1] ಅಲ್ಲಾಹು ಅದರ ಮೂಲಕ ಕೇವಲ ನಿಮ್ಮನ್ನು ಪರೀಕ್ಷಿಸುತ್ತಿದ್ದಾನೆ. ಯಾವ ವಿಷಯದಲ್ಲಿ ನೀವು ಭಿನ್ನಮತ ತಳೆದಿದ್ದಿರೋ ಅದನ್ನು ಪುನರುತ್ಥಾನ ದಿನದಂದು ಅವನು ನಿಮಗೆ ಖಂಡಿತ ವಿವರಿಸಿಕೊಡುವನು.
[1] ಅಂದರೆ ನಾವು ಯಾವುದೇ ಸ್ಥಿತಿಯಲ್ಲೂ ನಿಮಗೆ ಸಹಾಯ ಮಾಡುತ್ತೇವೆಂದು ಒಂದು ಗುಂಪಿಗೆ ವಾಗ್ದಾನ ಮಾಡಿ ಅವರೊಡನೆ ಮೈತ್ರಿಯ ಕರಾರು ಮಾಡುತ್ತೀರಿ. ನಂತರ ಅವರಿಗೆ ವಿರುದ್ಧವಾಗಿ ಅವರಿಗಿಂತಲೂ ಹೆಚ್ಚು ಜನಬಲ ಅಥವಾ ಧನಬಲವಿರುವ ಗುಂಪಿನೊಂದಿಗೆ ಮೈತ್ರಿ ಮಾಡುವ ಅವಕಾಶ ಸಿಕ್ಕಿದರೆ ಮೊದಲನೆ ಗುಂಪಿನೊಂದಿಗೆ ಮಾಡಿದ ಕರಾರನ್ನು ಎಸೆದು ಈ ಗುಂಪಿನೊಂದಿಗೆ ಮೈತ್ರಿಯ ಕರಾರು ಮಾಡಿಕೊಳ್ಳುತ್ತೀರಿ. ಇಂತಹ ಸ್ಥಿತಿಯು ಇಸ್ಲಾಮೀ ಪೂರ್ವ ಜಾಹಿಲೀ ಕಾಲದಲ್ಲಿ ಸಾಮಾನ್ಯವಾಗಿತ್ತು. ಇದನ್ನು ಇಸ್ಲಾಂ ವಿರೋಧಿಸುತ್ತದೆ.
|
وَلَا تَكُونُوا۟ كَٱلَّتِى نَقَضَتْ غَزْلَهَا مِنۢ بَعْدِ قُوَّةٍ أَنكَٰثًۭا تَتَّخِذُونَ أَيْمَٰنَكُمْ دَخَلًۢا بَيْنَكُمْ أَن تَكُونَ أُمَّةٌ هِىَ أَرْبَىٰ مِنْ أُمَّةٍ ۚ إِنَّمَا يَبْلُوكُمُ ٱللَّهُ بِهِۦ ۚ وَلَيُبَيِّنَنَّ لَكُمْ يَوْمَ ٱلْقِيَٰمَةِ مَا كُنتُمْ فِيهِ تَخْتَلِفُونَ. ﴿92﴾ |
| 93 ಅಲ್ಲಾಹು ಇಚ್ಛಿಸುತ್ತಿದ್ದರೆ ಅವನು ನಿಮ್ಮೆಲ್ಲರನ್ನೂ ಒಂದೇ ಸಮುದಾಯವಾಗಿ ಮಾಡುತ್ತಿದ್ದನು. ಆದರೆ ಅವನು ಇಚ್ಛಿಸುವವರನ್ನು ಅವನು ದಾರಿತಪ್ಪಿಸುತ್ತಾನೆ ಮತ್ತು ಅವನು ಇಚ್ಛಿಸುವವರನ್ನು ಸನ್ಮಾರ್ಗದಲ್ಲಿ ಸೇರಿಸುತ್ತಾನೆ. ನೀವು ಮಾಡುತ್ತಿದ್ದ ಕರ್ಮಗಳ ಬಗ್ಗೆ ನಿಮ್ಮೊಡನೆ ಖಂಡಿತ ಪ್ರಶ್ನಿಸಲಾಗುವುದು. | وَلَوْ شَآءَ ٱللَّهُ لَجَعَلَكُمْ أُمَّةًۭ وَٰحِدَةًۭ وَلَٰكِن يُضِلُّ مَن يَشَآءُ وَيَهْدِى مَن يَشَآءُ ۚ وَلَتُسْـَٔلُنَّ عَمَّا كُنتُمْ تَعْمَلُونَ. ﴿93﴾ |
| 94 ನೀವು ನಿಮ್ಮ ಆಣೆಗಳನ್ನು ಪರಸ್ಪರ ವಂಚನೆ ಮಾಡುವುದಕ್ಕಾಗಿ ಬಳಸಬೇಡಿ. ಇದರಿಂದ ನಿಮ್ಮ ಪಾದಗಳು ಸ್ಥಿರವಾಗಿ ನಿಂತ ಬಳಿಕವೂ ಅಲುಗಾಡಬಹುದು ಮತ್ತು ಅಲ್ಲಾಹನ ಮಾರ್ಗದಿಂದ ಜನರನ್ನು ತಡೆದ ನಿಮಿತ್ತ ನೀವು ಶಿಕ್ಷೆಯ ರುಚಿಯನ್ನು ನೋಡುವಿರಿ. (ಪರಲೋಕದಲ್ಲಿ) ನಿಮಗೆ ಕಠೋರವಾದ ಶಿಕ್ಷೆಯೂ ಇದೆ. | وَلَا تَتَّخِذُوٓا۟ أَيْمَٰنَكُمْ دَخَلًۢا بَيْنَكُمْ فَتَزِلَّ قَدَمٌۢ بَعْدَ ثُبُوتِهَا وَتَذُوقُوا۟ ٱلسُّوٓءَ بِمَا صَدَدتُّمْ عَن سَبِيلِ ٱللَّهِ ۖ وَلَكُمْ عَذَابٌ عَظِيمٌۭ. ﴿94﴾ |
| 95 ಅಲ್ಲಾಹನ ಕರಾರನ್ನು ತುಚ್ಛ ಬೆಲೆಗೆ ಮಾರಾಟ ಮಾಡಬೇಡಿ. ಅಲ್ಲಾಹನ ಬಳಿ ಏನಿದೆಯೋ ಅದೇ ನಿಮಗೆ ಉತ್ತಮ. ನೀವು ತಿಳಿದವರಾಗಿದ್ದರೆ. | وَلَا تَشْتَرُوا۟ بِعَهْدِ ٱللَّهِ ثَمَنًۭا قَلِيلًا ۚ إِنَّمَا عِندَ ٱللَّهِ هُوَ خَيْرٌۭ لَّكُمْ إِن كُنتُمْ تَعْلَمُونَ. ﴿95﴾ |
| 96 ನಿಮ್ಮ ಬಳಿ ಏನಿವೆಯೋ ಅವೆಲ್ಲವೂ ನಶ್ವರವಾಗಿವೆ. ಆದರೆ ಅಲ್ಲಾಹನ ಬಳಿ ಏನಿವೆಯೋ ಅವು ಶಾಶ್ವತವಾಗಿವೆ. ತಾಳ್ಮೆಯಿಂದ ಜೀವಿಸುವವರು ಯಾರೋ—ಅವರು ಮಾಡುವ ಅತ್ಯುತ್ತಮ ಕರ್ಮಗಳಿಗೆ ನಾವು ಅತ್ಯುತ್ತಮ ಪ್ರತಿಫಲವನ್ನು ನೀಡುವೆವು. | مَا عِندَكُمْ يَنفَدُ ۖ وَمَا عِندَ ٱللَّهِ بَاقٍۢ ۗ وَلَنَجْزِيَنَّ ٱلَّذِينَ صَبَرُوٓا۟ أَجْرَهُم بِأَحْسَنِ مَا كَانُوا۟ يَعْمَلُونَ. ﴿96﴾ |
| 97 ಗಂಡಾಗಿರಲಿ, ಹೆಣ್ಣಾಗಿರಲಿ—ಯಾರು ಸತ್ಯವಿಶ್ವಾಸಿಯಾಗಿದ್ದು ಸತ್ಕರ್ಮಗಳನ್ನು ಮಾಡುತ್ತಾರೋ ಅವರಿಗೆ ನಾವು ಖಂಡಿತವಾಗಿಯೂ ಅತ್ಯುತ್ತಮ ಬದುಕನ್ನು ನೀಡುವೆವು. ಅವರು ಮಾಡುವ ಅತ್ಯುತ್ತಮ ಕರ್ಮಗಳಿಗೆ ನಾವು ಅತ್ಯುತ್ತಮ ಪ್ರತಿಫಲವನ್ನು ನೀಡುವೆವು. | مَنْ عَمِلَ صَٰلِحًۭا مِّن ذَكَرٍ أَوْ أُنثَىٰ وَهُوَ مُؤْمِنٌۭ فَلَنُحْيِيَنَّهُۥ حَيَوٰةًۭ طَيِّبَةًۭ ۖ وَلَنَجْزِيَنَّهُمْ أَجْرَهُم بِأَحْسَنِ مَا كَانُوا۟ يَعْمَلُونَ. ﴿97﴾ |
| 98 ನೀವು ಕುರ್ಆನ್ ಪಠಿಸುವಾಗ ಬಹಿಷ್ಕೃತ ಶೈತಾನನಿಂದ ಅಲ್ಲಾಹನಲ್ಲಿ ಅಭಯ ಯಾಚಿಸಿರಿ. | فَإِذَا قَرَأْتَ ٱلْقُرْءَانَ فَٱسْتَعِذْ بِٱللَّهِ مِنَ ٱلشَّيْطَٰنِ ٱلرَّجِيمِ. ﴿98﴾ |
| 99 ಸತ್ಯವಿಶ್ವಾಸಿಗಳು ಮತ್ತು ತಮ್ಮ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ಭರವಸೆಯಿಡುವವರ ಮೇಲೆ ಅವನಿಗೆ ಯಾವುದೇ ಅಧಿಕಾರವಿಲ್ಲ. | إِنَّهُۥ لَيْسَ لَهُۥ سُلْطَٰنٌ عَلَى ٱلَّذِينَ ءَامَنُوا۟ وَعَلَىٰ رَبِّهِمْ يَتَوَكَّلُونَ. ﴿99﴾ |
| 100 ಅವನಿಗೆ ಅಧಿಕಾರವಿರುವುದು ಅವನನ್ನು ಮಿತ್ರನಾಗಿ ಸ್ವೀಕರಿಸಿದವರ ಮೇಲೆ ಮತ್ತು ಅಲ್ಲಾಹನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡುವವರ ಮೇಲೆ ಮಾತ್ರ. | إِنَّمَا سُلْطَٰنُهُۥ عَلَى ٱلَّذِينَ يَتَوَلَّوْنَهُۥ وَٱلَّذِينَ هُم بِهِۦ مُشْرِكُونَ. ﴿100﴾ |
| 101 ನಾವು ಒಂದು ವಚನದ ಸ್ಥಾನದಲ್ಲಿ ಇನ್ನೊಂದು ವಚನವನ್ನು ಬದಲಾಯಿಸಿದರೆ— ಅಲ್ಲಾಹು ಏನು ಅವತೀರ್ಣಗೊಳಿಸುತ್ತಿದ್ದಾನೆಂದು ಅವನಿಗೆ ಪೂರ್ಣ ಜ್ಞಾನವಿದೆ—ಅವರು ಹೇಳುತ್ತಾರೆ: “ನೀನು ಸುಳ್ಳಾರೋಪ ಮಾಡುವವನಾಗಿರುವೆ.” ಅಲ್ಲ, ವಾಸ್ತವವಾಗಿ ಅವರಲ್ಲಿ ಹೆಚ್ಚಿನವರಿಗೂ ವಿಷಯವೇನೆಂದೇ ತಿಳಿದಿಲ್ಲ. | وَإِذَا بَدَّلْنَآ ءَايَةًۭ مَّكَانَ ءَايَةٍۢ ۙ وَٱللَّهُ أَعْلَمُ بِمَا يُنَزِّلُ قَالُوٓا۟ إِنَّمَآ أَنتَ مُفْتَرٍۭ ۚ بَلْ أَكْثَرُهُمْ لَا يَعْلَمُونَ. ﴿101﴾ |
| 102 (ಪ್ರವಾದಿಯವರೇ) ಹೇಳಿರಿ: “ಸತ್ಯವಿಶ್ವಾಸಿಗಳನ್ನು ದೃಢವಾಗಿ ನಿಲ್ಲಿಸಲು ಮತ್ತು ಮುಸಲ್ಮಾನರಿಗೆ ಸನ್ಮಾರ್ಗದರ್ಶಿ ಮತ್ತು ಸುವಾರ್ತೆಯಾಗಿ ಪವಿತ್ರಾತ್ಮನು (ಜಿಬ್ರೀಲ್) ಇದನ್ನು ಅಲ್ಲಾಹನಿಂದ ಇಳಿಸಿ ತಂದಿದ್ದಾರೆ.” | قُلْ نَزَّلَهُۥ رُوحُ ٱلْقُدُسِ مِن رَّبِّكَ بِٱلْحَقِّ لِيُثَبِّتَ ٱلَّذِينَ ءَامَنُوا۟ وَهُدًۭى وَبُشْرَىٰ لِلْمُسْلِمِينَ. ﴿102﴾ |
|
103
“ಇವನಿಗೆ (ಪ್ರವಾದಿಗೆ) ಯಾರೋ ಒಬ್ಬ ಮನುಷ್ಯ ಕಲಿಸಿಕೊಡುತ್ತಿದ್ದಾನೆ” ಎಂದು ಅವರು ಹೇಳುತ್ತಿದ್ದಾರೆಂದು ನಮಗೆ ಖಂಡಿತ ತಿಳಿದಿದೆ. ಅವರು ಉಲ್ಲೇಖಿಸುವ ಆ ವ್ಯಕ್ತಿಯದ್ದು ಅಜಮಿ ಭಾಷೆ. ಆದರೆ ಇದು ಸ್ಪಷ್ಟ ಅರಬ್ಬಿ ಭಾಷೆಯಲ್ಲಿದೆ.[1]
[1] ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕಾಲದಲ್ಲಿ ತೌರಾತ್ ಇಂಜೀಲ್ ಕಲಿತ ಕೆಲವು ಗುಲಾಮರಿದ್ದರು. ಅವರು ಸ್ಪಷ್ಟ ಮತ್ತು ನಿರರ್ಗಳವಾಗಿ ಅರಬ್ಬಿ ಮಾತನಾಡುತ್ತಿರಲಿಲ್ಲ. ಅವರು ನಂತರ ಇಸ್ಲಾಂ ಸ್ವೀಕರಿಸಿದರು. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇವರಿಂದ ಕಲಿತ ಮಾತುಗಳನ್ನು ಅಲ್ಲಾಹನ ವಚನಗಳಾದ ಕುರ್ಆನ್ ಎಂದು ಹೇಳುತ್ತಿದ್ದಾರೆಂದು ಮಕ್ಕಾದ ಸತ್ಯನಿಷೇಧಿಗಳು ಆರೋಪಿಸಿದರು. ಅವರಿಗೆ ಈ ವಚನದಲ್ಲಿ ಉತ್ತರ ನೀಡಲಾಗಿದೆ. ಅದೇನೆಂದರೆ, ನೀವು ಆರೋಪಿಸುವ ಆ ಜನರು ಶುದ್ಧ ಅರಬ್ಬಿ ಭಾಷೆ ಮಾತನಾಡುವವರಲ್ಲ. ಆದರೆ ಈ ಕುರ್ಆನ್ ಶುದ್ಧ ಮತ್ತು ಪರಮೋಚ್ಛ ಮಟ್ಟದ ಅರಬ್ಬಿ ಸಾಹಿತ್ಯ ಶೈಲಿಯಲ್ಲಿದೆ. ಇದರಂತಿರುವ ಒಂದು ಅಧ್ಯಾಯವನ್ನು ರಚಿಸಿ ತರಲು ಸಂಪೂರ್ಣ ಅರೇಬಿಯನ್ ಪರ್ಯಾಯ ದ್ವೀಪವೇ ವಿಫಲವಾಗಿದೆ. ಅರಬ್ಬಿ ಭಾಷೆ ಮಾತನಾಡದ ಜನರಿಗೂ, ಅರಬ್ಬಿ ಭಾಷೆಯನ್ನು ನಿರರ್ಗಳವಾಗಿ ಮಾತನಾಡಲಾಗದ ಜನರಿಗೂ ಅಜಮಿ ಎಂದು ಕರೆಯಲಾಗುತ್ತದೆ.
|
وَلَقَدْ نَعْلَمُ أَنَّهُمْ يَقُولُونَ إِنَّمَا يُعَلِّمُهُۥ بَشَرٌۭ ۗ لِّسَانُ ٱلَّذِى يُلْحِدُونَ إِلَيْهِ أَعْجَمِىٌّۭ وَهَٰذَا لِسَانٌ عَرَبِىٌّۭ مُّبِينٌ. ﴿103﴾ |
| 104 ಅಲ್ಲಾಹನ ವಚನಗಳಲ್ಲಿ ವಿಶ್ವಾಸವಿಡದವರು ಯಾರೋ—ಅವರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ. ಅವರಿಗೆ ಯಾತನಾಮಯ ಶಿಕ್ಷೆಯಿದೆ. | إِنَّ ٱلَّذِينَ لَا يُؤْمِنُونَ بِـَٔايَٰتِ ٱللَّهِ لَا يَهْدِيهِمُ ٱللَّهُ وَلَهُمْ عَذَابٌ أَلِيمٌ. ﴿104﴾ |
| 105 ಅಲ್ಲಾಹನ ವಚನಗಳಲ್ಲಿ ವಿಶ್ವಾಸವಿಡದವರೇ ಸುಳ್ಳು ಸುಳ್ಳಾಗಿ ಆರೋಪಿಸುವವರು. ಅವರೇ ನಿಜವಾದ ಸುಳ್ಳುಗಾರರು. | إِنَّمَا يَفْتَرِى ٱلْكَذِبَ ٱلَّذِينَ لَا يُؤْمِنُونَ بِـَٔايَٰتِ ٱللَّهِ ۖ وَأُو۟لَٰٓئِكَ هُمُ ٱلْكَٰذِبُونَ. ﴿105﴾ |
|
106
ಸತ್ಯವಿಶ್ವಾಸಿಯಾದ ಬಳಿಕವೂ ಅಲ್ಲಾಹನನ್ನು ನಿಷೇಧಿಸುವವರು ಯಾರೋ—ಹೃದಯವು ಸತ್ಯವಿಶ್ವಾಸದಲ್ಲಿ ದೃಢವಾಗಿದ್ದು ಬಲವಂತಕ್ಕೊಳಗಾಗಿ (ಸತ್ಯನಿಷೇಧದ ಮಾತು ಹೇಳುವವರು) ಇದರಿಂದ ಹೊರತಾಗಿದ್ದಾರೆ.[1] ಆದರೆ ಯಾರು ಮುಕ್ತ ಹೃದಯದಿಂದ ನಿಷೇಧಿಸುತ್ತಾರೋ, ಅವರು ಅಲ್ಲಾಹನ ಕೋಪಕ್ಕೆ ತುತ್ತಾಗುತ್ತಾರೆ. ಅವರಿಗೆ ಭಯಾನಕ ಶಿಕ್ಷೆಯೂ ಇದೆ.
[1] ಮುಸ್ಲಿಂ ವಿದ್ವಾಂಸರ ಒಕ್ಕೊರಳ ಅಭಿಪ್ರಾಯದಂತೆ ಬಲವಂತಕ್ಕೊಳಗಾಗಿ ಸತ್ಯನಿಷೇಧದ ಮಾತು ಹೇಳುವವನು ಅಥವಾ ಸತ್ಯನಿಷೇಧದ ಕೆಲಸ ಮಾಡುವವನು—ಅವನ ಹೃದಯವು ಸತ್ಯವಿಶ್ವಾಸದಲ್ಲಿ ದೃಢವಾಗಿದ್ದರೆ ಅವನು ಸತ್ಯನಿಷೇಧಿಯಾಗುವುದಿಲ್ಲ.
|
مَن كَفَرَ بِٱللَّهِ مِنۢ بَعْدِ إِيمَٰنِهِۦٓ إِلَّا مَنْ أُكْرِهَ وَقَلْبُهُۥ مُطْمَئِنٌّۢ بِٱلْإِيمَٰنِ وَلَٰكِن مَّن شَرَحَ بِٱلْكُفْرِ صَدْرًۭا فَعَلَيْهِمْ غَضَبٌۭ مِّنَ ٱللَّهِ وَلَهُمْ عَذَابٌ عَظِيمٌۭ. ﴿106﴾ |
| 107 ಅದೇಕೆಂದರೆ, ಅವರು ಪರಲೋಕಕ್ಕಿಂತಲೂ ಇಹಲೋಕವನ್ನೇ ಹೆಚ್ಚು ಇಷ್ಟಪಡುತ್ತಾರೆ. ನಿಶ್ಚಯವಾಗಿಯೂ ಸತ್ಯನಿಷೇಧಿಗಳಾದ ಜನರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ. | ذَٰلِكَ بِأَنَّهُمُ ٱسْتَحَبُّوا۟ ٱلْحَيَوٰةَ ٱلدُّنْيَا عَلَى ٱلْءَاخِرَةِ وَأَنَّ ٱللَّهَ لَا يَهْدِى ٱلْقَوْمَ ٱلْكَٰفِرِينَ. ﴿107﴾ |
| 108 ಅವರು ಯಾರೆಂದರೆ, ಅಲ್ಲಾಹು ಅವರ ಹೃದಯಗಳಿಗೆ, ಕಿವಿಗಳಿಗೆ ಮತ್ತು ದೃಷ್ಟಿಗಳಿಗೆ ಮೊಹರು ಹಾಕಿದವರು. ಅವರೇ ನಿರ್ಲಕ್ಷ್ಯರಾಗಿರುವವರು. | أُو۟لَٰٓئِكَ ٱلَّذِينَ طَبَعَ ٱللَّهُ عَلَىٰ قُلُوبِهِمْ وَسَمْعِهِمْ وَأَبْصَٰرِهِمْ ۖ وَأُو۟لَٰٓئِكَ هُمُ ٱلْغَٰفِلُونَ. ﴿108﴾ |
| 109 ಸಂಶಯವೇ ಇಲ್ಲ. ಪರಲೋಕದಲ್ಲಿ ಅವರು ಸಂಪೂರ್ಣ ನಷ್ಟಹೊಂದಿದವರಾಗಿರುವರು. | لَا جَرَمَ أَنَّهُمْ فِى ٱلْءَاخِرَةِ هُمُ ٱلْخَٰسِرُونَ. ﴿109﴾ |
| 110 ಹಿಂಸೆಗೆ ಗುರಿಯಾದ ಬಳಿಕವೂ ವಲಸೆ (ಹಿಜ್ರ) ಮಾಡಿದವರು, ನಂತರ ಯುದ್ಧ ಮಾಡಿದವರು ಮತ್ತು ಸ್ಥೈರ್ಯ ತೋರಿದವರು ಯಾರೋ—ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು ಅವರನ್ನು ಕ್ಷಮಿಸುವನು ಮತ್ತು ಅವರಿಗೆ ದಯೆ ತೋರುವನು. | ثُمَّ إِنَّ رَبَّكَ لِلَّذِينَ هَاجَرُوا۟ مِنۢ بَعْدِ مَا فُتِنُوا۟ ثُمَّ جَٰهَدُوا۟ وَصَبَرُوٓا۟ إِنَّ رَبَّكَ مِنۢ بَعْدِهَا لَغَفُورٌۭ رَّحِيمٌۭ. ﴿110﴾ |
| 111 ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಪರವಾಗಿ ತರ್ಕಿಸುತ್ತಾ ಬರುವ ಮತ್ತು ಪ್ರತಿಯೊಬ್ಬರಿಗೂ ಅವರು ಮಾಡಿದ ಕರ್ಮಗಳಿಗೆ ಪೂರ್ಣ ಪ್ರತಿಫಲವನ್ನು ನೀಡಲಾಗುವ ದಿನ. ಅವರಿಗೆ ಯಾವುದೇ ಅನ್ಯಾಯವಾಗುವುದಿಲ್ಲ. | ۞ يَوْمَ تَأْتِى كُلُّ نَفْسٍۢ تُجَٰدِلُ عَن نَّفْسِهَا وَتُوَفَّىٰ كُلُّ نَفْسٍۢ مَّا عَمِلَتْ وَهُمْ لَا يُظْلَمُونَ. ﴿111﴾ |
| 112 ಅಲ್ಲಾಹು ಒಂದು ಉದಾಹರಣೆಯನ್ನು ಕೊಡುತ್ತಾನೆ. ನಿರ್ಭಯ ಮತ್ತು ನೆಮ್ಮದಿಯಾಗಿದ್ದ ಒಂದು ಊರು. ಅದಕ್ಕೆ ಎಲ್ಲಾ ಕಡೆಗಳಿಂದಲೂ ಯಥೇಷ್ಟ ಆಹಾರ ಸಾಮಗ್ರಿಗಳು ಬರುತ್ತಿದ್ದವು. ಆದರೆ ಅವರು ಅಲ್ಲಾಹನ ಅನುಗ್ರಹಗಳನ್ನು ನಿಷೇಧಿಸಿದರು. ಆಗ ಅಲ್ಲಾಹು ಅವರಿಗೆ ಹಸಿವು ಮತ್ತು ಭಯದ ವಾತಾವರಣವನ್ನು ಅನುಭವಿಸುವಂತೆ ಮಾಡಿದನು. ಇದು ಅವರು ಮಾಡಿದ ಕರ್ಮಗಳ ಫಲವಾಗಿತ್ತು. | وَضَرَبَ ٱللَّهُ مَثَلًۭا قَرْيَةًۭ كَانَتْ ءَامِنَةًۭ مُّطْمَئِنَّةًۭ يَأْتِيهَا رِزْقُهَا رَغَدًۭا مِّن كُلِّ مَكَانٍۢ فَكَفَرَتْ بِأَنْعُمِ ٱللَّهِ فَأَذَٰقَهَا ٱللَّهُ لِبَاسَ ٱلْجُوعِ وَٱلْخَوْفِ بِمَا كَانُوا۟ يَصْنَعُونَ. ﴿112﴾ |
| 113 ಅವರಿಗೆ ಅವರಿಂದಲೇ ಒಬ್ಬ ಸಂದೇಶವಾಹಕರು ಬಂದಿದ್ದರು. ಆದರೆ ಅವರು ಆ ಸಂದೇಶವಾಹಕರನ್ನು ನಿಷೇಧಿಸಿದರು. ಆಗ ಅವರು ಅಕ್ರಮವೆಸಗುತ್ತಿದ್ದಾಗಲೇ ಶಿಕ್ಷೆಯು ಅವರನ್ನು ಹಿಡಿದುಕೊಂಡಿತು. | وَلَقَدْ جَآءَهُمْ رَسُولٌۭ مِّنْهُمْ فَكَذَّبُوهُ فَأَخَذَهُمُ ٱلْعَذَابُ وَهُمْ ظَٰلِمُونَ. ﴿113﴾ |
| 114 ಅಲ್ಲಾಹು ನಿಮಗೆ ಒದಗಿಸಿದ ಧರ್ಮಸಮ್ಮತ ಮತ್ತು ಶುದ್ಧ ವಸ್ತುಗಳನ್ನು ತಿನ್ನಿರಿ. ಅಲ್ಲಾಹನ ಅನುಗ್ರಹಗಳಿಗೆ ಕೃತಜ್ಞರಾಗಿರಿ. ನೀವು ಅವನನ್ನು ಮಾತ್ರ ಆರಾಧಿಸುವವರಾಗಿದ್ದರೆ. | فَكُلُوا۟ مِمَّا رَزَقَكُمُ ٱللَّهُ حَلَٰلًۭا طَيِّبًۭا وَٱشْكُرُوا۟ نِعْمَتَ ٱللَّهِ إِن كُنتُمْ إِيَّاهُ تَعْبُدُونَ. ﴿114﴾ |
| 115 ಅವನು ನಿಮಗೆ ಶವ, ರಕ್ತ, ಹಂದಿ ಮಾಂಸ ಮತ್ತು ಅಲ್ಲಾಹೇತರರ ಹೆಸರನ್ನು ಘೋಷಿಸಲಾದ ವಸ್ತುಗಳನ್ನು ಮಾತ್ರ ನಿಷೇಧಿಸಿದ್ದಾನೆ. ಆದರೆ ಯಾರಾದರೂ (ಇವುಗಳನ್ನು ಸೇವಿಸಲು) ನಿರ್ಬಂಧಿತನಾದರೆ ಅವನ ಮೇಲೆ ದೋಷವಿಲ್ಲ. ಆದರೆ ಅವನು ಅಗತ್ಯಕ್ಕಿಂತ ಹೆಚ್ಚು ಸೇವಿಸಬಾರದು ಮತ್ತು (ಅಲ್ಲಾಹು ಅನುಮತಿಸಿದ) ಎಲ್ಲೆಯನ್ನು ಮೀರಬಾರದು. ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ಕರುಣೆ ತೋರುವವನಾಗಿದ್ದಾನೆ. | إِنَّمَا حَرَّمَ عَلَيْكُمُ ٱلْمَيْتَةَ وَٱلدَّمَ وَلَحْمَ ٱلْخِنزِيرِ وَمَآ أُهِلَّ لِغَيْرِ ٱللَّهِ بِهِۦ ۖ فَمَنِ ٱضْطُرَّ غَيْرَ بَاغٍۢ وَلَا عَادٍۢ فَإِنَّ ٱللَّهَ غَفُورٌۭ رَّحِيمٌۭ. ﴿115﴾ |
| 116 ನೀವು ಯಾವುದೇ ವಸ್ತುವನ್ನೂ ನಿಮ್ಮ ನಾಲಗೆಗಳಿಂದ ಸುಳ್ಳು ಸುಳ್ಳಾಗಿ “ಇದು ಧರ್ಮಸಮ್ಮತ ಮತ್ತು ಇದು ಧರ್ಮನಿಷಿದ್ಧ” ಎಂದು ಹೇಳಬೇಡಿ. ಇದರಿಂದ ನೀವು ಅಲ್ಲಾಹನ ಮೇಲೆ ಸುಳ್ಳು ಆರೋಪಿಸಿದವರಾಗುವಿರಿ. ಅಲ್ಲಾಹನ ಮೇಲೆ ಸುಳ್ಳು ಆರೋಪಿಸುವವರು ಖಂಡಿತ ಯಶಸ್ವಿಯಾಗುವುದಿಲ್ಲ. | وَلَا تَقُولُوا۟ لِمَا تَصِفُ أَلْسِنَتُكُمُ ٱلْكَذِبَ هَٰذَا حَلَٰلٌۭ وَهَٰذَا حَرَامٌۭ لِّتَفْتَرُوا۟ عَلَى ٱللَّهِ ٱلْكَذِبَ ۚ إِنَّ ٱلَّذِينَ يَفْتَرُونَ عَلَى ٱللَّهِ ٱلْكَذِبَ لَا يُفْلِحُونَ. ﴿116﴾ |
| 117 ಅವರಿಗಿರುವುದು ತಾತ್ಕಾಲಿಕ ಆನಂದ ಮಾತ್ರ. (ಪರಲೋಕದಲ್ಲಿ) ಅವರಿಗೆ ಯಾತನಾಮಯ ಶಿಕ್ಷೆಯಿದೆ. | مَتَٰعٌۭ قَلِيلٌۭ وَلَهُمْ عَذَابٌ أَلِيمٌۭ. ﴿117﴾ |
|
118
(ಪ್ರವಾದಿಯವರೇ) ನಾವು ನಿಮಗೆ ಇದಕ್ಕೆ ಮೊದಲು ತಿಳಿಸಿಕೊಟ್ಟ ವಸ್ತುಗಳನ್ನು ನಾವು ಯಹೂದಿಗಳಿಗೆ ನಿಷೇಧಿಸಿದ್ದೇವೆ.[1] ನಾವು ಅವರಿಗೆ ಯಾವುದೇ ಅನ್ಯಾಯ ಮಾಡಿಲ್ಲ. ಆದರೆ ಅವರು ಅವರೊಂದಿಗೇ ಅನ್ಯಾಯ ಮಾಡುತ್ತಿದ್ದಾರೆ.
[1] ನೋಡಿ 6:146
|
وَعَلَى ٱلَّذِينَ هَادُوا۟ حَرَّمْنَا مَا قَصَصْنَا عَلَيْكَ مِن قَبْلُ ۖ وَمَا ظَلَمْنَٰهُمْ وَلَٰكِن كَانُوٓا۟ أَنفُسَهُمْ يَظْلِمُونَ. ﴿118﴾ |
| 119 ಯಾರು ಅಜ್ಞಾನದಿಂದ ಪಾಪ ಮಾಡಿ ನಂತರ ಪಶ್ಚಾತ್ತಾಪಪಟ್ಟು ಸ್ವಯಂ ಸುಧಾರಿಸಿಕೊಳ್ಳುತ್ತಾರೋ—ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು ಅದರ ಬಳಿಕವೂ ಅವರನ್ನು ಕ್ಷಮಿಸುವನು ಮತ್ತು ಅವರಿಗೆ ದಯೆ ತೋರುವನು. | ثُمَّ إِنَّ رَبَّكَ لِلَّذِينَ عَمِلُوا۟ ٱلسُّوٓءَ بِجَهَٰلَةٍۢ ثُمَّ تَابُوا۟ مِنۢ بَعْدِ ذَٰلِكَ وَأَصْلَحُوٓا۟ إِنَّ رَبَّكَ مِنۢ بَعْدِهَا لَغَفُورٌۭ رَّحِيمٌ. ﴿119﴾ |
| 120 ನಿಶ್ಚಯವಾಗಿಯೂ ಇಬ್ರಾಹೀಮರು ಒಬ್ಬ ಮುಖಂಡರಾಗಿದ್ದರು. ಅವರು ಅಲ್ಲಾಹನಿಗೆ ವಿಧೇಯತೆ ತೋರುವವರು ಮತ್ತು ಏಕನಿಷ್ಠರಾಗಿದ್ದರು. ಅವರು ಬಹುದೇವವಿಶ್ವಾಸಿಗಳಲ್ಲಿ ಸೇರಿದವರಾಗಿರಲಿಲ್ಲ. | إِنَّ إِبْرَٰهِيمَ كَانَ أُمَّةًۭ قَانِتًۭا لِّلَّهِ حَنِيفًۭا وَلَمْ يَكُ مِنَ ٱلْمُشْرِكِينَ. ﴿120﴾ |
| 121 ಅವರು ಅಲ್ಲಾಹನ ಅನುಗ್ರಹಗಳಿಗೆ ಆಭಾರಿಯಾಗಿದ್ದರು. ಅಲ್ಲಾಹು ಅವರನ್ನು ಆರಿಸಿದ್ದನು ಮತ್ತು ನೇರಮಾರ್ಗಕ್ಕೆ ಸೇರಿಸಿದ್ದನು. | شَاكِرًۭا لِّأَنْعُمِهِ ۚ ٱجْتَبَىٰهُ وَهَدَىٰهُ إِلَىٰ صِرَٰطٍۢ مُّسْتَقِيمٍۢ. ﴿121﴾ |
| 122 ನಾವು ಅವರಿಗೆ ಇಹಲೋಕದಲ್ಲೇ ಒಳಿತನ್ನು ದಯಪಾಲಿಸಿದ್ದೇವೆ. ಪರಲೋಕದಲ್ಲಿ ಅವರು ನಿಶ್ಚಯವಾಗಿಯೂ ನೀತಿವಂತರಲ್ಲಿ ಸೇರುವರು. | وَءَاتَيْنَٰهُ فِى ٱلدُّنْيَا حَسَنَةًۭ ۖ وَإِنَّهُۥ فِى ٱلْءَاخِرَةِ لَمِنَ ٱلصَّٰلِحِينَ. ﴿122﴾ |
| 123 ನಂತರ, ನಾವು ನಿಮಗೆ, “ಏಕನಿಷ್ಠರಾದ ಇಬ್ರಾಹೀಮರ ಧರ್ಮವನ್ನು ಹಿಂಬಾಲಿಸಿರಿ” ಎಂದು ದೇವವಾಣಿಯನ್ನು ನೀಡಿದೆವು. ಅವರು ಬಹುದೇವವಿಶ್ವಾಸಿಗಳಲ್ಲಿ ಸೇರಿದವರಾಗಿರಲಿಲ್ಲ. | ثُمَّ أَوْحَيْنَآ إِلَيْكَ أَنِ ٱتَّبِعْ مِلَّةَ إِبْرَٰهِيمَ حَنِيفًۭا ۖ وَمَا كَانَ مِنَ ٱلْمُشْرِكِينَ. ﴿123﴾ |
| 124 ಸಬ್ಬತ್ನ ವಿಷಯದಲ್ಲಿ ಭಿನ್ನಮತ ತಳೆದವರ ಮೇಲೆಯೇ ಅದನ್ನು ಗೌರವಿಸಬೇಕೆಂದು ನಾವು ವಿಧಿಸಿದೆವು. ಅವರು ಯಾವ ವಿಷಯದಲ್ಲಿ ಭಿನ್ನಮತ ತಳೆದರೋ ಆ ವಿಷಯದಲ್ಲಿ ನಿಮ್ಮ ಪರಿಪಾಲಕನು (ಅಲ್ಲಾಹು) ಪುನರುತ್ಥಾನ ದಿನದಂದು ಅವರ ಮಧ್ಯೆ ಖಂಡಿತ ತೀರ್ಪು ನೀಡುವನು. | إِنَّمَا جُعِلَ ٱلسَّبْتُ عَلَى ٱلَّذِينَ ٱخْتَلَفُوا۟ فِيهِ ۚ وَإِنَّ رَبَّكَ لَيَحْكُمُ بَيْنَهُمْ يَوْمَ ٱلْقِيَٰمَةِ فِيمَا كَانُوا۟ فِيهِ يَخْتَلِفُونَ. ﴿124﴾ |
| 125 ವಿವೇಚನೆ ಮತ್ತು ಅತ್ಯುತ್ತಮ ಉಪದೇಶದ ಮೂಲಕ ನಿಮ್ಮ ಪರಿಪಾಲಕನ (ಅಲ್ಲಾಹನ) ಮಾರ್ಗಕ್ಕೆ ಜನರನ್ನು ಕರೆಯಿರಿ. ಅವರೊಡನೆ ಅತ್ಯುತ್ತಮ ರೀತಿಯಲ್ಲಿ ತರ್ಕಿಸಿರಿ. ತನ್ನ ಮಾರ್ಗದಿಂದ ತಪ್ಪಿಹೋದವರು ಯಾರೆಂದು ನಿಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ಬಹಳ ಚೆನ್ನಾಗಿ ತಿಳಿದಿದೆ. ಸನ್ಮಾರ್ಗದಲ್ಲಿರುವವರು ಯಾರೆಂದೂ ಅವನಿಗೆ ಬಹಳ ಚೆನ್ನಾಗಿ ತಿಳಿದಿದೆ. | ٱدْعُ إِلَىٰ سَبِيلِ رَبِّكَ بِٱلْحِكْمَةِ وَٱلْمَوْعِظَةِ ٱلْحَسَنَةِ ۖ وَجَٰدِلْهُم بِٱلَّتِى هِىَ أَحْسَنُ ۚ إِنَّ رَبَّكَ هُوَ أَعْلَمُ بِمَن ضَلَّ عَن سَبِيلِهِۦ ۖ وَهُوَ أَعْلَمُ بِٱلْمُهْتَدِينَ. ﴿125﴾ |
| 126 ನೀವು ಪ್ರತೀಕಾರ ಪಡೆಯುವುದಾದರೆ ನಿಮ್ಮ ವಿರುದ್ಧ (ವೈರಿಗಳಿಂದ) ಎಷ್ಟು ಅತಿರೇಕ ನಡೆದಿದೆಯೋ ಅಷ್ಟೇ ಪ್ರತೀಕಾರ ಪಡೆಯಿರಿ. ನೀವು ತಾಳ್ಮೆ ತೋರುವುದಾದರೆ, ತಾಳ್ಮೆಯುಳ್ಳವರಿಗೆ ಖಂಡಿತವಾಗಿಯೂ ಅದೇ ಅತ್ಯುತ್ತಮವಾಗಿದೆ. | وَإِنْ عَاقَبْتُمْ فَعَاقِبُوا۟ بِمِثْلِ مَا عُوقِبْتُم بِهِۦ ۖ وَلَئِن صَبَرْتُمْ لَهُوَ خَيْرٌۭ لِّلصَّٰبِرِينَ. ﴿126﴾ |
| 127 (ಪ್ರವಾದಿಯವರೇ) ತಾಳ್ಮೆ ತೋರಿರಿ. ಅಲ್ಲಾಹನ ಕೃಪೆಯಿಂದಲೇ ನೀವು ತಾಳ್ಮೆ ತೋರುತ್ತೀರಿ. ಅವರ ಬಗ್ಗೆ ನೊಂದುಕೊಳ್ಳಬೇಡಿ. ಅವರು ಮಾಡುವ ಪಿತೂರಿಗಳನ್ನು ನೋಡಿ ಸಂಕಟಪಡಬೇಡಿ. | وَٱصْبِرْ وَمَا صَبْرُكَ إِلَّا بِٱللَّهِ ۚ وَلَا تَحْزَنْ عَلَيْهِمْ وَلَا تَكُ فِى ضَيْقٍۢ مِّمَّا يَمْكُرُونَ. ﴿127﴾ |
| 128 ನಿಶ್ಚಯವಾಗಿಯೂ ಅಲ್ಲಾಹು ದೇವಭಯವುಳ್ಳವರೊಡನೆ ಮತ್ತು ನೀತಿವಂತರೊಡನೆ ಇದ್ದಾನೆ. | إِنَّ ٱللَّهَ مَعَ ٱلَّذِينَ ٱتَّقَوا۟ وَّٱلَّذِينَ هُم مُّحْسِنُونَ. ﴿128﴾ |