Loading date... | Loading Hijri date... | Loading time...

الصف

ಕನ್ನಡ Translation with Arabic Quran Text

ಕನ್ನಡ العربية
1 ಭೂಮ್ಯಾಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನ ಪರಿಶುದ್ಧಿಯನ್ನು ಕೊಂಡಾಡುತ್ತಿವೆ. ಅವನು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ. سَبَّحَ لِلَّهِ مَا فِى ٱلسَّمَٰوَٰتِ وَمَا فِى ٱلْأَرْضِ ۖ وَهُوَ ٱلْعَزِيزُ ٱلْحَكِيمُ. ﴿1﴾
2 ಓ ಸತ್ಯವಿಶ್ವಾಸಿಗಳೇ! ನೀವು ಮಾಡದ ಕಾರ್ಯವನ್ನು ನೀವೇಕೆ ಹೇಳುತ್ತೀರಿ? يَٰٓأَيُّهَا ٱلَّذِينَ ءَامَنُوا۟ لِمَ تَقُولُونَ مَا لَا تَفْعَلُونَ. ﴿2﴾
3 ನೀವು ಮಾಡದ ಕಾರ್ಯವನ್ನು ನೀವು ಹೇಳುವುದು ಅಲ್ಲಾಹು ಅತ್ಯಧಿಕ ದ್ವೇಷಿಸುವ ವಿಷಯವಾಗಿದೆ. كَبُرَ مَقْتًا عِندَ ٱللَّهِ أَن تَقُولُوا۟ مَا لَا تَفْعَلُونَ. ﴿3﴾
4 ಅಲ್ಲಾಹನ ಮಾರ್ಗದಲ್ಲಿ ಸಾಲು ಸಾಲಾಗಿ ನಿಂತು ಯುದ್ಧ ಮಾಡುವವರನ್ನು ಅಲ್ಲಾಹು ಪ್ರೀತಿಸುತ್ತಾನೆ. ಅವರು ಸೀಸವನ್ನು ಎರಕ ಹೊಯ್ದು ಕಟ್ಟಿದ ಕಟ್ಟಡವೇನೋ ಎಂಬಂತೆ. إِنَّ ٱللَّهَ يُحِبُّ ٱلَّذِينَ يُقَٰتِلُونَ فِى سَبِيلِهِۦ صَفًّۭا كَأَنَّهُم بُنْيَٰنٌۭ مَّرْصُوصٌۭ. ﴿4﴾
5 ಮೂಸಾ ತಮ್ಮ ಜನರೊಡನೆ ಹೇಳಿದ ಸಂದರ್ಭ: “ನನ್ನ ಜನರೇ! ನೀವೇಕೆ ನನಗೆ ತೊಂದರೆ ಕೊಡುತ್ತೀರಿ? ನಾನು ನಿಮ್ಮ ಬಳಿಗೆ ಬಂದ ಅಲ್ಲಾಹನ ಸಂದೇಶವಾಹಕನೆಂದು ನಿಮಗೆ ಬಹಳ ಚೆನ್ನಾಗಿ ತಿಳಿದಿದೆ.” ನಂತರ ಅವರು (ಜನರು) ಸತ್ಯದಿಂದ ವಿಚಲಿಸಿದಾಗ ಅಲ್ಲಾಹು ಅವರ ಹೃದಯಗಳನ್ನು ವಕ್ರಗೊಳಿಸಿದನು. ದುಷ್ಕರ್ಮಿಗಳಾದ ಜನರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ. وَإِذْ قَالَ مُوسَىٰ لِقَوْمِهِۦ يَٰقَوْمِ لِمَ تُؤْذُونَنِى وَقَد تَّعْلَمُونَ أَنِّى رَسُولُ ٱللَّهِ إِلَيْكُمْ ۖ فَلَمَّا زَاغُوٓا۟ أَزَاغَ ٱللَّهُ قُلُوبَهُمْ ۚ وَٱللَّهُ لَا يَهْدِى ٱلْقَوْمَ ٱلْفَٰسِقِينَ. ﴿5﴾
6 ಮರ್ಯಮರ ಮಗ ಈಸಾ ಹೇಳಿದ ಸಂದರ್ಭ: “ಓ ಇಸ್ರಾಯೇಲ್ ಮಕ್ಕಳೇ! ನಾನು ನನಗಿಂತ ಮೊದಲು ಅವತೀರ್ಣವಾದ ತೌರಾತನ್ನು ದೃಢೀಕರಿಸಲು ಮತ್ತು ನನ್ನ ನಂತರ ಬರುವ ಅಹ್ಮದ್[1] ಎಂಬ ಹೆಸರಿನ ಒಬ್ಬ ಸಂದೇಶವಾಹಕರ ಬಗ್ಗೆ ನಿಮಗೆ ಸುವಾರ್ತೆ ತಿಳಿಸಲು ನಿಮ್ಮ ಬಳಿಗೆ ಕಳುಹಿಸಲಾಗಿರುವ ಅಲ್ಲಾಹನ ಸಂದೇಶವಾಹಕನಾಗಿದ್ದೇನೆ.” ಆದರೆ ಅವರು (ಈಸಾ) ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ಅವರ ಬಳಿಗೆ ಬಂದಾಗ ಅವರು ಹೇಳಿದರು: “ಇದು ಸ್ಪಷ್ಟ ಮಾಟಗಾರಿಕೆಯಾಗಿದೆ.”
[1] ಅಹ್ಮದ್ ಪ್ರವಾದಿ ಮುಹಮ್ಮದ್ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ರವರ ಇನ್ನೊಂದು ಹೆಸರು.
وَإِذْ قَالَ عِيسَى ٱبْنُ مَرْيَمَ يَٰبَنِىٓ إِسْرَٰٓءِيلَ إِنِّى رَسُولُ ٱللَّهِ إِلَيْكُم مُّصَدِّقًۭا لِّمَا بَيْنَ يَدَىَّ مِنَ ٱلتَّوْرَىٰةِ وَمُبَشِّرًۢا بِرَسُولٍۢ يَأْتِى مِنۢ بَعْدِى ٱسْمُهُۥٓ أَحْمَدُ ۖ فَلَمَّا جَآءَهُم بِٱلْبَيِّنَٰتِ قَالُوا۟ هَٰذَا سِحْرٌۭ مُّبِينٌۭ. ﴿6﴾
7 ಅಲ್ಲಾಹನ ಮೇಲೆ ಸುಳ್ಳಾರೋಪಿಸುವವನಿಗಿಂತಲೂ ದೊಡ್ಡ ಅಕ್ರಮಿ ಯಾರು? ವಾಸ್ತವವಾಗಿ ಅವನನ್ನು ಇಸ್ಲಾಂ ಧರ್ಮಕ್ಕೆ ಆಮಂತ್ರಿಸಲಾಗುತ್ತಿದೆ. ಅಕ್ರಮಿಗಳಾದ ಜನರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ. وَمَنْ أَظْلَمُ مِمَّنِ ٱفْتَرَىٰ عَلَى ٱللَّهِ ٱلْكَذِبَ وَهُوَ يُدْعَىٰٓ إِلَى ٱلْإِسْلَٰمِ ۚ وَٱللَّهُ لَا يَهْدِى ٱلْقَوْمَ ٱلظَّٰلِمِينَ. ﴿7﴾
8 ಅವರು ತಮ್ಮ ಬಾಯಿಯ ಮೂಲಕ ಅಲ್ಲಾಹನ ಬೆಳಕನ್ನು ನಂದಿಸಲು ಬಯಸುತ್ತಾರೆ. ಆದರೆ ಅಲ್ಲಾಹು ತನ್ನ ಬೆಳಕನ್ನು ಪೂರ್ಣಗೊಳಿಸಿ ಬಿಡುವನು. ಸತ್ಯನಿಷೇಧಿಗಳು ಎಷ್ಟು ದ್ವೇಷಿಸಿದರೂ ಸಹ. يُرِيدُونَ لِيُطْفِـُٔوا۟ نُورَ ٱللَّهِ بِأَفْوَٰهِهِمْ وَٱللَّهُ مُتِمُّ نُورِهِۦ وَلَوْ كَرِهَ ٱلْكَٰفِرُونَ. ﴿8﴾
9 ಅವನೇ ಸನ್ಮಾರ್ಗ ಮತ್ತು ಸತ್ಯಧರ್ಮದೊಂದಿಗೆ ತನ್ನ ಸಂದೇಶವಾಹಕರನ್ನು ಕಳುಹಿಸಿದವನು. ಈ ಧರ್ಮವು ಇತರೆಲ್ಲಾ ಧರ್ಮಗಳ ಮೇಲೆ ಜಯಗಳಿಸುವಂತೆ ಮಾಡುವುದಕ್ಕಾಗಿ. ಬಹುದೇವಾರಾಧಕರು ಎಷ್ಟು ದ್ವೇಷಿಸಿದರೂ ಸಹ. هُوَ ٱلَّذِىٓ أَرْسَلَ رَسُولَهُۥ بِٱلْهُدَىٰ وَدِينِ ٱلْحَقِّ لِيُظْهِرَهُۥ عَلَى ٱلدِّينِ كُلِّهِۦ وَلَوْ كَرِهَ ٱلْمُشْرِكُونَ. ﴿9﴾
10 ಓ ಸತ್ಯವಿಶ್ವಾಸಿಗಳೇ! ಯಾತನಾಮಯ ಶಿಕ್ಷೆಯಿಂದ ನಿಮ್ಮನ್ನು ಪಾರು ಮಾಡುವ ಒಂದು ವ್ಯಾಪಾರದ ಬಗ್ಗೆ ನಾನು ನಿಮಗೆ ತಿಳಿಸಿಕೊಡಲೇ? يَٰٓأَيُّهَا ٱلَّذِينَ ءَامَنُوا۟ هَلْ أَدُلُّكُمْ عَلَىٰ تِجَٰرَةٍۢ تُنجِيكُم مِّنْ عَذَابٍ أَلِيمٍۢ. ﴿10﴾
11 ನೀವು ಅಲ್ಲಾಹನಲ್ಲಿ ಮತ್ತು ಅವನ ಸಂದೇಶವಾಹಕರಲ್ಲಿ ವಿಶ್ವಾಸವಿಡಿರಿ. ನಿಮ್ಮ ತನು-ಧನಗಳಿಂದ ಅಲ್ಲಾಹನ ಮಾರ್ಗದಲ್ಲಿ ಹೋರಾಡಿರಿ. ನೀವು ತಿಳಿದವರಾಗಿದ್ದರೆ ಅದೇ ನಿಮ್ಮ ಅತ್ಯುತ್ತಮವಾಗಿದೆ. تُؤْمِنُونَ بِٱللَّهِ وَرَسُولِهِۦ وَتُجَٰهِدُونَ فِى سَبِيلِ ٱللَّهِ بِأَمْوَٰلِكُمْ وَأَنفُسِكُمْ ۚ ذَٰلِكُمْ خَيْرٌۭ لَّكُمْ إِن كُنتُمْ تَعْلَمُونَ. ﴿11﴾
12 ಅಲ್ಲಾಹು ನಿಮ್ಮ ಪಾಪಗಳನ್ನು ಕ್ಷಮಿಸುವನು ಮತ್ತು ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳಿಗೆ ಮತ್ತು ಶಾಶ್ವತ ವಾಸದ ಸ್ವರ್ಗೋದ್ಯಾನಗಳಲ್ಲಿರುವ ಪರಿಶುದ್ಧ ವಸತಿಗಳಿಗೆ ನಿಮ್ಮನ್ನು ಪ್ರವೇಶ ಮಾಡಿಸುವನು. ಅದೇ ಅತಿದೊಡ್ಡ ವಿಜಯ. يَغْفِرْ لَكُمْ ذُنُوبَكُمْ وَيُدْخِلْكُمْ جَنَّٰتٍۢ تَجْرِى مِن تَحْتِهَا ٱلْأَنْهَٰرُ وَمَسَٰكِنَ طَيِّبَةًۭ فِى جَنَّٰتِ عَدْنٍۢ ۚ ذَٰلِكَ ٱلْفَوْزُ ٱلْعَظِيمُ. ﴿12﴾
13 ನೀವು ಇಷ್ಟಪಡುವ ಇನ್ನೊಂದು ಅನುಗ್ರಹವನ್ನು ಅವನು ನಿಮಗೆ ದಯಪಾಲಿಸುವನು. ಅದು ಅಲ್ಲಾಹನ ಸಹಾಯ ಮತ್ತು ಹತ್ತಿರದಲ್ಲೇ ಇರುವ ವಿಜಯವಾಗಿದೆ. ಸತ್ಯವಿಶ್ವಾಸಿಗಳಿಗೆ ಸುವಾರ್ತೆಯನ್ನು ತಿಳಿಸಿರಿ. وَأُخْرَىٰ تُحِبُّونَهَا ۖ نَصْرٌۭ مِّنَ ٱللَّهِ وَفَتْحٌۭ قَرِيبٌۭ ۗ وَبَشِّرِ ٱلْمُؤْمِنِينَ. ﴿13﴾
14 ಓ ಸತ್ಯವಿಶ್ವಾಸಿಗಳೇ! ನೀವು ಅಲ್ಲಾಹನ ಸಹಾಯಕರಾಗಿರಿ. ಮರ್ಯಮರ ಮಗ ಈಸಾ ಹವಾರಿಗಳೊಡನೆ ಕೇಳಿದಂತೆ: “ಅಲ್ಲಾಹನ ಮಾರ್ಗದಲ್ಲಿ ನನಗೆ ಸಹಾಯಕರಾಗಿ ಯಾರಿದ್ದೀರಿ?” ಹವಾರಿಗಳು ಉತ್ತರಿಸಿದರು: “ನಾವು ಅಲ್ಲಾಹನ ಮಾರ್ಗದಲ್ಲಿ ಸಹಾಯ ಮಾಡುತ್ತೇವೆ.” ನಂತರ ಇಸ್ರಾಯೇಲ್ ಮಕ್ಕಳಲ್ಲಿ ಸೇರಿದ ಒಂದು ಗುಂಪು ವಿಶ್ವಾಸವಿಟ್ಟರೆ ಇನ್ನೊಂದು ಗುಂಪು ನಿಷೇಧಿಸಿತು. ಆಗ ನಾವು ಸತ್ಯವಿಶ್ವಾಸಿಗಳಿಗೆ ಅವರ ವೈರಿಗಳ ವಿರುದ್ಧ ಬೆಂಬಲವನ್ನು ನೀಡಿದೆವು. ತನ್ನಿಮಿತ್ತ ಅವರು ವಿಜಯಿಗಳಾದರು. يَٰٓأَيُّهَا ٱلَّذِينَ ءَامَنُوا۟ كُونُوٓا۟ أَنصَارَ ٱللَّهِ كَمَا قَالَ عِيسَى ٱبْنُ مَرْيَمَ لِلْحَوَارِيِّۦنَ مَنْ أَنصَارِىٓ إِلَى ٱللَّهِ ۖ قَالَ ٱلْحَوَارِيُّونَ نَحْنُ أَنصَارُ ٱللَّهِ ۖ فَـَٔامَنَت طَّآئِفَةٌۭ مِّنۢ بَنِىٓ إِسْرَٰٓءِيلَ وَكَفَرَت طَّآئِفَةٌۭ ۖ فَأَيَّدْنَا ٱلَّذِينَ ءَامَنُوا۟ عَلَىٰ عَدُوِّهِمْ فَأَصْبَحُوا۟ ظَٰهِرِينَ. ﴿14﴾