Thursday, 13 August 2026 Hijri: 04:01:43 pm
MalayalamQuran.in
അധ്യായം 5. സൂറത്തുല്‍ മാഇദ (Ayath 42-45) കണ്ണിനു കണ്ണ്, കാതിന് കാത് — Islamonweb - : Quranonweb അധ്യായം 5. സൂറത്തുല്‍ മാഇദ (Ayath 37-41) മോഷ്ടിച്ചവന്‍റെ കൈ മുറിക്കണം — Islamonweb - : Quranonweb അധ്യായം 5. സൂറത്തുല്‍ മാഇദ (Ayath 32-36) വസീല - ഗുഹയില്‍ കുടുങ്ങിയ 3 പേര്‍ — Islamonweb - : Quranonweb തഫ്സീറുൽ ബൈളാവി: അവലംബം, ഉള്ളടക്കം, സമീപനംe — Islamonweb - : Tafseer തഫ്സീറുൽ കശ്ശാഫ്: പണ്ഡിതര്‍ എന്ത് പറയുന്നു? — Islamonweb - : Tafseer അൽ ജദീദ് ഫീ ഇഅ്ജാസിൽ ഖുർആൻ: ബൂഥ്വിയൻ ദർശനങ്ങളുടെ വിപ്ലവാത്മക രീതിശാസ്ത്രം — Islamonweb - : Tafseer ഹദീസ്: ഒരു സാമൂഹിക സമീപനം — Islamonweb - : Hadith ഹദീസ് സംരക്ഷണത്തിൽ അഹ്മദ് അലി സഹാറൻപൂരിയുടെ സംഭാവനകള്‍ — Islamonweb - : Hadith ഹദീസ് രംഗത്തെ മലബാറിന്റെ സംഭാവനകള്‍ — Islamonweb - : Hadith ഹംറാ അൽഅസദ്: പതറാത്ത വിശ്വാസത്തിന്റെ ചരിത്രസാക്ഷ്യം — Islamonweb - : Seerahonweb അധ്യായം 5. സൂറത്തുല്‍ മാഇദ (Ayath 42-45) കണ്ണിനു കണ്ണ്, കാതിന് കാത് — Islamonweb - : Quranonweb അധ്യായം 5. സൂറത്തുല്‍ മാഇദ (Ayath 37-41) മോഷ്ടിച്ചവന്‍റെ കൈ മുറിക്കണം — Islamonweb - : Quranonweb അധ്യായം 5. സൂറത്തുല്‍ മാഇദ (Ayath 32-36) വസീല - ഗുഹയില്‍ കുടുങ്ങിയ 3 പേര്‍ — Islamonweb - : Quranonweb തഫ്സീറുൽ ബൈളാവി: അവലംബം, ഉള്ളടക്കം, സമീപനംe — Islamonweb - : Tafseer തഫ്സീറുൽ കശ്ശാഫ്: പണ്ഡിതര്‍ എന്ത് പറയുന്നു? — Islamonweb - : Tafseer അൽ ജദീദ് ഫീ ഇഅ്ജാസിൽ ഖുർആൻ: ബൂഥ്വിയൻ ദർശനങ്ങളുടെ വിപ്ലവാത്മക രീതിശാസ്ത്രം — Islamonweb - : Tafseer ഹദീസ്: ഒരു സാമൂഹിക സമീപനം — Islamonweb - : Hadith ഹദീസ് സംരക്ഷണത്തിൽ അഹ്മദ് അലി സഹാറൻപൂരിയുടെ സംഭാവനകള്‍ — Islamonweb - : Hadith ഹദീസ് രംഗത്തെ മലബാറിന്റെ സംഭാവനകള്‍ — Islamonweb - : Hadith ഹംറാ അൽഅസദ്: പതറാത്ത വിശ്വാസത്തിന്റെ ചരിത്രസാക്ഷ്യം — Islamonweb - : Seerahonweb
Quran translation reader

അൽ ജുമുഅ الجمعة Al-Jumuah

Surah 62 മദനിയ്യ • مدنية • Madaniyah 11 ആയത്തുകൾ • 11 Ayahs

സൂറത്ത് അൽ ജുമുഅ (Al-Jumuah), ഖുർആൻ അധ്യായം 62 — അറബി ആയത്തുകളും ಕನ್ನಡ വിവർത്തനവും ഉൾപ്പെടെ 11 ആയത്തുകൾ വായിക്കുക. Read Surah Al-Jumuah with Arabic text and ಕನ್ನಡ translation.

بِسْمِ ٱللَّهِ ٱلرَّحْمَٰنِ ٱلرَّحِيمِ
1

ಭೂಮ್ಯಾಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನ ಪರಿಶುದ್ಧಿಯನ್ನು ಕೊಂಡಾಡುತ್ತಿವೆ. ಅವನು ಸಾಮ್ರಾಟನು, ಪರಮ ಪವಿತ್ರನು, ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.

يُسَبِّحُ لِلَّهِ مَا فِي ٱلسَّمَٰوَٰتِ وَمَا فِي ٱلۡأَرۡضِ ٱلۡمَلِكِ ٱلۡقُدُّوسِ ٱلۡعَزِيزِ ٱلۡحَكِيمِ ۝١
2

ಅವನೇ ಅನಕ್ಷರಸ್ಥ ಜನರಿಗೆ ಅವರಿಂದಲೇ ಒಬ್ಬ ಸಂದೇಶವಾಹಕರನ್ನು ಕಳುಹಿಸಿದವನು. ಆ ಸಂದೇಶವಾಹಕರು ಅವರಿಗೆ ಅಲ್ಲಾಹನ ವಚನಗಳನ್ನು ಓದಿಕೊಡುತ್ತಾರೆ, ಅವರನ್ನು ಶುದ್ಧೀಕರಿಸುತ್ತಾರೆ ಮತ್ತು ಅವರಿಗೆ ಗ್ರಂಥ ಹಾಗೂ ವಿವೇಕವನ್ನು ಕಲಿಸಿಕೊಡುತ್ತಾರೆ. ಇದಕ್ಕಿಂತ ಮೊದಲು ಅವರು ಸ್ಪಷ್ಟ ದುರ್ಮಾರ್ಗದಲ್ಲಿದ್ದರು.

هُوَ ٱلَّذِي بَعَثَ فِي ٱلۡأُمِّيِّـۧنَ رَسُولٗا مِّنۡهُمۡ يَتۡلُواْ عَلَيۡهِمۡ ءَايَٰتِهِۦ وَيُزَكِّيهِمۡ وَيُعَلِّمُهُمُ ٱلۡكِتَٰبَ وَٱلۡحِكۡمَةَ وَإِن كَانُواْ مِن قَبۡلُ لَفِي ضَلَٰلٖ مُّبِينٖ ۝٢
3

ಅವರಲ್ಲಿ ಇನ್ನೂ ಅವರೊಡನೆ ಸೇರಿಕೊಳ್ಳದ ಜನರಿಗೂ ಕೂಡ (ಅವರು ಸಂದೇಶವಾಹಕರಾಗಿದ್ದಾರೆ). ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.

وَءَاخَرِينَ مِنۡهُمۡ لَمَّا يَلۡحَقُواْ بِهِمۡۚ وَهُوَ ٱلۡعَزِيزُ ٱلۡحَكِيمُ ۝٣
4

ಅದು ಅಲ್ಲಾಹನ ಔದಾರ್ಯವಾಗಿದ್ದು ಅವನು ಇಚ್ಛಿಸುವವರಿಗೆ ಅದನ್ನು ದಯಪಾಲಿಸುತ್ತಾನೆ. ಅಲ್ಲಾಹು ಮಹಾ ಔದಾರ್ಯವಂತನಾಗಿದ್ದಾನೆ.

ذَٰلِكَ فَضۡلُ ٱللَّهِ يُؤۡتِيهِ مَن يَشَآءُۚ وَٱللَّهُ ذُو ٱلۡفَضۡلِ ٱلۡعَظِيمِ ۝٤
5

ತೌರಾತ್‌ನಲ್ಲಿರುವಂತೆ ನಡೆದುಕೊಳ್ಳಲು ಆದೇಶಿಸಲಾಗಿಯೂ ಸಹ ಅದರಂತೆ ನಡೆದುಕೊಳ್ಳದವರು ಯಾರೋ ಅವರ ಉದಾಹರಣೆಯು ಗ್ರಂಥಗಳನ್ನು ಹೊರುವ ಕತ್ತೆಯಂತೆ. ಅಲ್ಲಾಹನ ದೃಷ್ಟಾಂತಗಳನ್ನು ನಿಷೇಧಿಸುವ ಜನರ ಉದಾಹರಣೆಯು ಬಹಳ ನಿಕೃಷ್ಟವಾಗಿದೆ. ಅಕ್ರಮಿಗಳಾದ ಜನರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ.

مَثَلُ ٱلَّذِينَ حُمِّلُواْ ٱلتَّوۡرَىٰةَ ثُمَّ لَمۡ يَحۡمِلُوهَا كَمَثَلِ ٱلۡحِمَارِ يَحۡمِلُ أَسۡفَارَۢاۚ بِئۡسَ مَثَلُ ٱلۡقَوۡمِ ٱلَّذِينَ كَذَّبُواْ بِـَٔايَٰتِ ٱللَّهِۚ وَٱللَّهُ لَا يَهۡدِي ٱلۡقَوۡمَ ٱلظَّٰلِمِينَ ۝٥
6

ಹೇಳಿರಿ: “ಓ ಯಹೂದಿಗಳೇ! ಇತರ ಜನರ ಹೊರತಾಗಿ ನೀವು ಮಾತ್ರ ಅಲ್ಲಾಹನ ಮಿತ್ರರು ಎಂಬ ನಿಮ್ಮ ದಾವೆಯು ಸತ್ಯವಾಗಿದ್ದರೆ ನೀವು ಸಾವನ್ನು ಬಯಸಿರಿ. ನೀವು ಸತ್ಯವಂತರಾಗಿದ್ದರೆ.”

قُلۡ يَٰٓأَيُّهَا ٱلَّذِينَ هَادُوٓاْ إِن زَعَمۡتُمۡ أَنَّكُمۡ أَوۡلِيَآءُ لِلَّهِ مِن دُونِ ٱلنَّاسِ فَتَمَنَّوُاْ ٱلۡمَوۡتَ إِن كُنتُمۡ صَٰدِقِينَ ۝٦
7

ಆದರೆ ಅವರ ಕೈಗಳು ಈಗಾಗಲೇ ಮಾಡಿಟ್ಟಿರುವ ದುಷ್ಕರ್ಮಗಳಿಂದಾಗಿ ಅವರೆಂದೂ ಸಾವನ್ನು ಬಯಸುವುದಿಲ್ಲ. ಅಲ್ಲಾಹು ಅಕ್ರಮಿಗಳ ಬಗ್ಗೆ ಬಹಳ ಚೆನ್ನಾಗಿ ತಿಳಿದಿದ್ದಾನೆ.

وَلَا يَتَمَنَّوۡنَهُۥٓ أَبَدَۢا بِمَا قَدَّمَتۡ أَيۡدِيهِمۡۚ وَٱللَّهُ عَلِيمُۢ بِٱلظَّٰلِمِينَ ۝٧
8

ಹೇಳಿರಿ: “ಯಾವ ಸಾವನ್ನು ಹೆದರಿ ನೀವು ಓಡಿ ಹೋಗುತ್ತಿದ್ದೀರೋ ಅದು ನಿಮ್ಮನ್ನು ಖಂಡಿತ ಭೇಟಿಯಾಗಲಿದೆ. ನಂತರ ನಿಮ್ಮನ್ನು ದೃಶ್ಯ-ಅದೃಶ್ಯಗಳನ್ನು ತಿಳಿದ ಅಲ್ಲಾಹನ ಬಳಿಗೆ ಮರಳಿಸಲಾಗುವುದು. ಆಗ ನೀವು ಮಾಡುತ್ತಿದ್ದ ಕರ್ಮಗಳ ಬಗ್ಗೆ ಅವನು ನಿಮಗೆ ತಿಳಿಸಿಕೊಡುವನು.”

قُلۡ إِنَّ ٱلۡمَوۡتَ ٱلَّذِي تَفِرُّونَ مِنۡهُ فَإِنَّهُۥ مُلَٰقِيكُمۡۖ ثُمَّ تُرَدُّونَ إِلَىٰ عَٰلِمِ ٱلۡغَيۡبِ وَٱلشَّهَٰدَةِ فَيُنَبِّئُكُم بِمَا كُنتُمۡ تَعۡمَلُونَ ۝٨
9

ಓ ಸತ್ಯವಿಶ್ವಾಸಿಗಳೇ! ಶುಕ್ರವಾರ ನಮಾಝ್‍ಗಾಗಿ ಕರೆಯಲಾದರೆ (ಅಝಾನ್ ನೀಡಲಾದರೆ) ಅಲ್ಲಾಹನ ಸ್ಮರಣೆಯ ಕಡೆಗೆ ಧಾವಿಸಿರಿ ಮತ್ತು ವ್ಯಾಪಾರ-ವ್ಯವಹಾರಗಳನ್ನು ಬಿಟ್ಟುಬಿಡಿ. ಅದು ನಿಮಗೆ ಅತ್ಯುತ್ತಮವಾಗಿದೆ. ನೀವು ತಿಳಿದವರಾಗಿದ್ದರೆ.

يَٰٓأَيُّهَا ٱلَّذِينَ ءَامَنُوٓاْ إِذَا نُودِيَ لِلصَّلَوٰةِ مِن يَوۡمِ ٱلۡجُمُعَةِ فَٱسۡعَوۡاْ إِلَىٰ ذِكۡرِ ٱللَّهِ وَذَرُواْ ٱلۡبَيۡعَۚ ذَٰلِكُمۡ خَيۡرٞ لَّكُمۡ إِن كُنتُمۡ تَعۡلَمُونَ ۝٩
10

ನಮಾಝ್ ಮುಗಿದ ನಂತರ ನೀವು ಭೂಮಿಯಲ್ಲಿ ಚದುರಿ ಹೋಗಿರಿ ಮತ್ತು ಅಲ್ಲಾಹನ ಔದಾರ್ಯವನ್ನು ಹುಡುಕಿರಿ. ಅಲ್ಲಾಹನನ್ನು ಅತ್ಯಧಿಕವಾಗಿ ಸ್ಮರಿಸಿರಿ. ನೀವು ಯಶಸ್ವಿಯಾಗುವುದಕ್ಕಾಗಿ.

فَإِذَا قُضِيَتِ ٱلصَّلَوٰةُ فَٱنتَشِرُواْ فِي ٱلۡأَرۡضِ وَٱبۡتَغُواْ مِن فَضۡلِ ٱللَّهِ وَٱذۡكُرُواْ ٱللَّهَ كَثِيرٗا لَّعَلَّكُمۡ تُفۡلِحُونَ ۝١٠
11

ಅವರು ವ್ಯಾಪಾರದ ಸರಕು ಮಾರಾಟವಾಗುವುದನ್ನು ಕಂಡರೆ ಅಥವಾ ಮನೋರಂಜನೆಯನ್ನು ಕಂಡರೆ ಅದರ ಕಡೆಗೆ ಓಡುತ್ತಾರೆ ಮತ್ತು ನಿಮ್ಮನ್ನು ನಿಂತ ಸ್ಥಿತಿಯಲ್ಲೇ ಬಿಟ್ಟುಬಿಡುತ್ತಾರೆ.[1] ಹೇಳಿರಿ: “ಅಲ್ಲಾಹನ ಬಳಿ ಏನಿದೆಯೋ ಅದು ವ್ಯಾಪಾರ ಮತ್ತು ಮನೋರಂಜನೆಗಿಂತಲೂ ಶ್ರೇಷ್ಠವಾಗಿದೆ. ಅಲ್ಲಾಹು ಉಪಜೀವನ ನೀಡುವುದರಲ್ಲಿ ಅತ್ಯುತ್ತಮನಾಗಿದ್ದಾನೆ.”

وَإِذَا رَأَوۡاْ تِجَٰرَةً أَوۡ لَهۡوًا ٱنفَضُّوٓاْ إِلَيۡهَا وَتَرَكُوكَ قَآئِمٗاۚ قُلۡ مَا عِندَ ٱللَّهِ خَيۡرٞ مِّنَ ٱللَّهۡوِ وَمِنَ ٱلتِّجَٰرَةِۚ وَٱللَّهُ خَيۡرُ ٱلرَّٰزِقِينَ ۝١١