Wednesday, 12 August 2026 Hijri: 03:06:22 pm
MalayalamQuran.in
അധ്യായം 5. സൂറത്തുല്‍ മാഇദ (Ayath 42-45) കണ്ണിനു കണ്ണ്, കാതിന് കാത് — Islamonweb - : Quranonweb അധ്യായം 5. സൂറത്തുല്‍ മാഇദ (Ayath 37-41) മോഷ്ടിച്ചവന്‍റെ കൈ മുറിക്കണം — Islamonweb - : Quranonweb അധ്യായം 5. സൂറത്തുല്‍ മാഇദ (Ayath 32-36) വസീല - ഗുഹയില്‍ കുടുങ്ങിയ 3 പേര്‍ — Islamonweb - : Quranonweb തഫ്സീറുൽ ബൈളാവി: അവലംബം, ഉള്ളടക്കം, സമീപനംe — Islamonweb - : Tafseer തഫ്സീറുൽ കശ്ശാഫ്: പണ്ഡിതര്‍ എന്ത് പറയുന്നു? — Islamonweb - : Tafseer അൽ ജദീദ് ഫീ ഇഅ്ജാസിൽ ഖുർആൻ: ബൂഥ്വിയൻ ദർശനങ്ങളുടെ വിപ്ലവാത്മക രീതിശാസ്ത്രം — Islamonweb - : Tafseer ഹദീസ്: ഒരു സാമൂഹിക സമീപനം — Islamonweb - : Hadith ഹദീസ് സംരക്ഷണത്തിൽ അഹ്മദ് അലി സഹാറൻപൂരിയുടെ സംഭാവനകള്‍ — Islamonweb - : Hadith ഹദീസ് രംഗത്തെ മലബാറിന്റെ സംഭാവനകള്‍ — Islamonweb - : Hadith ഹംറാ അൽഅസദ്: പതറാത്ത വിശ്വാസത്തിന്റെ ചരിത്രസാക്ഷ്യം — Islamonweb - : Seerahonweb അധ്യായം 5. സൂറത്തുല്‍ മാഇദ (Ayath 42-45) കണ്ണിനു കണ്ണ്, കാതിന് കാത് — Islamonweb - : Quranonweb അധ്യായം 5. സൂറത്തുല്‍ മാഇദ (Ayath 37-41) മോഷ്ടിച്ചവന്‍റെ കൈ മുറിക്കണം — Islamonweb - : Quranonweb അധ്യായം 5. സൂറത്തുല്‍ മാഇദ (Ayath 32-36) വസീല - ഗുഹയില്‍ കുടുങ്ങിയ 3 പേര്‍ — Islamonweb - : Quranonweb തഫ്സീറുൽ ബൈളാവി: അവലംബം, ഉള്ളടക്കം, സമീപനംe — Islamonweb - : Tafseer തഫ്സീറുൽ കശ്ശാഫ്: പണ്ഡിതര്‍ എന്ത് പറയുന്നു? — Islamonweb - : Tafseer അൽ ജദീദ് ഫീ ഇഅ്ജാസിൽ ഖുർആൻ: ബൂഥ്വിയൻ ദർശനങ്ങളുടെ വിപ്ലവാത്മക രീതിശാസ്ത്രം — Islamonweb - : Tafseer ഹദീസ്: ഒരു സാമൂഹിക സമീപനം — Islamonweb - : Hadith ഹദീസ് സംരക്ഷണത്തിൽ അഹ്മദ് അലി സഹാറൻപൂരിയുടെ സംഭാവനകള്‍ — Islamonweb - : Hadith ഹദീസ് രംഗത്തെ മലബാറിന്റെ സംഭാവനകള്‍ — Islamonweb - : Hadith ഹംറാ അൽഅസദ്: പതറാത്ത വിശ്വാസത്തിന്റെ ചരിത്രസാക്ഷ്യം — Islamonweb - : Seerahonweb
Quran translation reader

അൽ മുദ്ദസ്സിർ المدثر Al-Muddaththir

സൂറത്ത് അൽ മുദ്ദസ്സിർ (Al-Muddaththir), ഖുർആൻ അധ്യായം 74 — അറബി ആയത്തുകളും ಕನ್ನಡ വിവർത്തനവും ഉൾപ്പെടെ 56 ആയത്തുകൾ വായിക്കുക. Read Surah Al-Muddaththir with Arabic text and ಕನ್ನಡ translation.

بِسْمِ ٱللَّهِ ٱلرَّحْمَٰنِ ٱلرَّحِيمِ
1

ಓ ಹೊದಿಕೆಯನ್ನು ಹೊದ್ದುಕೊಂಡವರೇ![1]

يَٰٓأَيُّهَا ٱلۡمُدَّثِّرُ ۝١
2

ಎದ್ದೇಳಿರಿ ಮತ್ತು ಎಚ್ಚರಿಕೆ ನೀಡಿರಿ.

قُمۡ فَأَنذِرۡ ۝٢
3

ನಿಮ್ಮ ಪರಿಪಾಲಕನ (ಅಲ್ಲಾಹನ) ಮಹಾತ್ಮೆಯನ್ನು ಕೊಂಡಾಡಿರಿ.

وَرَبَّكَ فَكَبِّرۡ ۝٣
4

ನಿಮ್ಮ ಬಟ್ಟೆಗಳನ್ನು ಶುದ್ಧವಾಗಿಡಿರಿ.

وَثِيَابَكَ فَطَهِّرۡ ۝٤
5

ಅಶುದ್ಧವನ್ನು ವರ್ಜಿಸಿರಿ.

وَٱلرُّجۡزَ فَٱهۡجُرۡ ۝٥
6

ಉಪಕಾರ ಮಾಡಿ ಹೆಚ್ಚು ಗಳಿಸುವ ವ್ಯಾಮೋಹ ಬಿಟ್ಟುಬಿಡಿ.

وَلَا تَمۡنُن تَسۡتَكۡثِرُ ۝٦
7

ನಿಮ್ಮ ಪರಿಪಾಲಕನ (ಅಲ್ಲಾಹನ) ಮಾರ್ಗದಲ್ಲಿ ತಾಳ್ಮೆಯಿಂದಿರಿ.

وَلِرَبِّكَ فَٱصۡبِرۡ ۝٧
8

ಕಹಳೆಯಲ್ಲಿ ಊದಲಾಗುವಾಗ.

فَإِذَا نُقِرَ فِي ٱلنَّاقُورِ ۝٨
9

ಆ ದಿನವು ಅತ್ಯಂತ ಕಠಿಣ ದಿನವಾಗಿರುವುದು.

فَذَٰلِكَ يَوۡمَئِذٖ يَوۡمٌ عَسِيرٌ ۝٩
10

ಅದು ಸತ್ಯನಿಷೇಧಿಗಳಿಗೆ ಸುಗಮವಾಗಿರುವುದಿಲ್ಲ.

عَلَى ٱلۡكَٰفِرِينَ غَيۡرُ يَسِيرٖ ۝١٠
11

ನನ್ನನ್ನು ಹಾಗೂ ನಾನು ಏಕಾಂಗಿಯಾಗಿ ಸೃಷ್ಟಿದವನನ್ನು ಬಿಟ್ಟುಬಿಡಿ.[1]

ذَرۡنِي وَمَنۡ خَلَقۡتُ وَحِيدٗا ۝١١
12

ನಾನು ಅವನಿಗೆ ಹೇರಳ ಐಶ್ವರ್ಯವನ್ನು ನೀಡಿದೆನು.

وَجَعَلۡتُ لَهُۥ مَالٗا مَّمۡدُودٗا ۝١٢
13

ಸನ್ನದ್ಧರಾಗಿರುವ ಗಂಡು ಮಕ್ಕಳನ್ನು ನೀಡಿದೆನು.

وَبَنِينَ شُهُودٗا ۝١٣
14

ನಾನು ಅವನಿಗೆ ಅನೇಕ ಅನುಕೂಲತೆಗಳನ್ನು ಮಾಡಿಕೊಟ್ಟೆನು.

وَمَهَّدتُّ لَهُۥ تَمۡهِيدٗا ۝١٤
15

ಆದರೂ ನಾನು ಅವನಿಗೆ ಇನ್ನೂ ಹೆಚ್ಚು ನೀಡಬೇಕೆಂದು ಅವನು ಹಾತೊರೆಯುತ್ತಾನೆ.

ثُمَّ يَطۡمَعُ أَنۡ أَزِيدَ ۝١٥
16

ಖಂಡಿತ ಇಲ್ಲ. ಅವನು ನಮ್ಮ ವಚನಗಳ ವಿರೋಧಿಯಾಗಿದ್ದಾನೆ.

كـَلَّآۖ إِنَّهُۥ كَانَ لِأٓيَٰتِنَا عَنِيدٗا ۝١٦
17

ಸದ್ಯವೇ ನಾನು ಅವನನ್ನು ಒಂದು ಪ್ರಯಾಸಕರ ಏರುವಿಕೆಯನ್ನು ಏರುವಂತೆ ಮಾಡುವೆನು.[1]

سَأُرۡهِقُهُۥ صَعُودًا ۝١٧
18

ಅವನು ಯೋಚಿಸಿದನು ಮತ್ತು ನಿರ್ಣಯಿಸಿದನು.

إِنَّهُۥ فَكَّرَ وَقَدَّرَ ۝١٨
19

ಅವನು ನಾಶವಾಗಲಿ! ಅವನು ಹೇಗೆ ನಿರ್ಣಯಿಸಿದನು?

فَقُتِلَ كَيۡفَ قَدَّرَ ۝١٩
20

ಪುನಃ ಅವನು ನಾಶವಾಗಲಿ! ಅವನು ಹೇಗೆ ನಿರ್ಣಯಿಸಿದನು?

ثُمَّ قُتِلَ كَيۡفَ قَدَّرَ ۝٢٠
21

ನಂತರ ಅವನು ನೋಡಿದನು.

ثُمَّ نَظَرَ ۝٢١
22

ನಂತರ ಅವನು ಹುಬ್ಬುಗಂಟಿಕ್ಕಿದನು ಮತ್ತು ಮುಖವನ್ನು ಸಿಂಡರಿಸಿದನು.

ثُمَّ عَبَسَ وَبَسَرَ ۝٢٢
23

ನಂತರ ಅವನು ಹಿಂದಡಿಯಿಟ್ಟನು ಮತ್ತು ಅಹಂಕಾರ ತೋರಿದನು.

ثُمَّ أَدۡبَرَ وَٱسۡتَكۡبَرَ ۝٢٣
24

ನಂತರ ಅವನು ಹೇಳಿದನು: “ಇದು (ಕುರ್‌ಆನ್) ನಕಲು ಮಾಡಲಾದ ಮಾಟಗಾರಿಕೆಯಲ್ಲದೆ ಇನ್ನೇನೂ ಅಲ್ಲ.

فَقَالَ إِنۡ هَٰذَآ إِلَّا سِحۡرٞ يُؤۡثَرُ ۝٢٤
25

ಇದು ಕೇವಲ ಒಬ್ಬ ಮನುಷ್ಯನ ಮಾತಾಗಿದೆ.”

إِنۡ هَٰذَآ إِلَّا قَوۡلُ ٱلۡبَشَرِ ۝٢٥
26

ನಾನು ಸದ್ಯವೇ ಅವನನ್ನು ಸಖರ್‌ಗೆ (ನರಕಕ್ಕೆ) ಹಾಕುವೆನು.

سَأُصۡلِيهِ سَقَرَ ۝٢٦
27

ಸಖರ್ ಏನೆಂದು ನಿಮಗೇನು ಗೊತ್ತು?

وَمَآ أَدۡرَىٰكَ مَا سَقَرُ ۝٢٧
28

ಅದು ಏನನ್ನೂ ಉಳಿಸುವುದಿಲ್ಲ ಮತ್ತು ಬಿಟ್ಟುಬಿಡುವುದಿಲ್ಲ.

لَا تُبۡقِي وَلَا تَذَرُ ۝٢٨
29

ಅದು ಚರ್ಮವನ್ನು ಸುಟ್ಟು ಕರಕಲಾಗಿಸುತ್ತದೆ.

لَوَّاحَةٞ لِّلۡبَشَرِ ۝٢٩
30

ಅದರ ಮೇಲೆ ಹತ್ತೊಂಬತ್ತು (ದೇವದೂತರುಗಳು) ಇದ್ದಾರೆ.

عَلَيۡهَا تِسۡعَةَ عَشَرَ ۝٣٠
31

ನಾವು ನರಕದ ಕಾವಲುಗಾರರಾಗಿ ಕೇವಲ ದೇವದೂತರುಗಳನ್ನು ಮಾತ್ರ ನಿಶ್ಚಯಿಸಿದ್ದೇವೆ. ನಾವು ಅವರ ಸಂಖ್ಯೆಯನ್ನು ಸತ್ಯನಿಷೇಧಿಗಳಿಗೆ ಒಂದು ಪರೀಕ್ಷೆಯಾಗಿ ಮಾಡಿದ್ದೇವೆ.[1] ಇದೇಕೆಂದರೆ, ಗ್ರಂಥ ನೀಡಲಾದವರಿಗೆ ದೃಢವಿಶ್ವಾಸ ಉಂಟಾಗಲೆಂದು[2] ಮತ್ತು ಸತ್ಯವಿಶ್ವಾಸಿಗಳ ವಿಶ್ವಾಸವು ಇನ್ನಷ್ಟು ಹೆಚ್ಚಾಗಲೆಂದು. ಅದೇ ರೀತಿ ಗ್ರಂಥ ನೀಡಲಾದವರು ಹಾಗೂ ಸತ್ಯವಿಶ್ವಾಸಿಗಳು ಸಂಶಯ ಪಡದಿರಲೆಂದು ಮತ್ತು ಹೃದಯದಲ್ಲಿ ರೋಗವಿರುವವರು ಹಾಗೂ ಸತ್ಯನಿಷೇಧಿಗಳು, “ಈ ವಿವರಣೆಯಿಂದ ಅಲ್ಲಾಹು ಉದ್ದೇಶಿಸುವುದೇನು?” ಎಂದು ಕೇಳಲೆಂದು. ಈ ರೀತಿ ಅಲ್ಲಾಹು ಅವನು ಇಚ್ಛಿಸಿದವರನ್ನು ದಾರಿತಪ್ಪಿಸುತ್ತಾನೆ ಮತ್ತು ಅವನು ಇಚ್ಛಿಸಿದವರಿಗೆ ಸನ್ಮಾರ್ಗ ತೋರಿಸುತ್ತಾನೆ. ನಿಮ್ಮ ಪರಿಪಾಲಕನ (ಅಲ್ಲಾಹನ) ಸೈನ್ಯವನ್ನು ಅವನ ಹೊರತು ಯಾರೂ ತಿಳಿದಿಲ್ಲ. ಅದು (ನರಕ) ಮನುಷ್ಯರಿಗೆ ಒಂದು ಉಪದೇಶವಲ್ಲದೆ ಇನ್ನೇನೂ ಅಲ್ಲ.

وَمَا جَعَلۡنَآ أَصۡحَٰبَ ٱلنَّارِ إِلَّا مَلَٰٓئِكَةٗۖ وَمَا جَعَلۡنَا عِدَّتَهُمۡ إِلَّا فِتۡنَةٗ لِّلَّذِينَ كَفَرُواْ لِيَسۡتَيۡقِنَ ٱلَّذِينَ أُوتُواْ ٱلۡكِتَٰبَ وَيَزۡدَادَ ٱلَّذِينَ ءَامَنُوٓاْ إِيمَٰنٗا وَلَا يَرۡتَابَ ٱلَّذِينَ أُوتُواْ ٱلۡكِتَٰبَ وَٱلۡمُؤۡمِنُونَ وَلِيَقُولَ ٱلَّذِينَ فِي قُلُوبِهِم مَّرَضٞ وَٱلۡكَٰفِرُونَ مَاذَآ أَرَادَ ٱللَّهُ بِهَٰذَا مَثَلٗاۚ كَذَٰلِكَ يُضِلُّ ٱللَّهُ مَن يَشَآءُ وَيَهۡدِي مَن يَشَآءُۚ وَمَا يَعۡلَمُ جُنُودَ رَبِّكَ إِلَّا هُوَۚ وَمَا هِيَ إِلَّا ذِكۡرَىٰ لِلۡبَشَرِ ۝٣١
32

ಇಲ್ಲ; ಚಂದ್ರನ ಮೇಲಾಣೆ!

كـَلَّا وَٱلۡقَمَرِ ۝٣٢
33

ರಾತ್ರಿಯ ಮೇಲಾಣೆ! ಅದು ಹಿಂದಕ್ಕೆ ಸರಿಯುವಾಗ.

وَٱلَّيۡلِ إِذۡ أَدۡبَرَ ۝٣٣
34

ಬೆಳಗ್ಗಿನ ಮೇಲಾಣೆ! ಅದು ಬೆಳಗುವಾಗ.

وَٱلصُّبۡحِ إِذَآ أَسۡفَرَ ۝٣٤
35

ನಿಶ್ಚಯವಾಗಿಯೂ ಅದು (ನರಕ) ಮಹಾ ವಿಷಯಗಳಲ್ಲಿ ಒಂದಾಗಿದೆ.

إِنَّهَا لَإِحۡدَى ٱلۡكُبَرِ ۝٣٥
36

ಮನುಷ್ಯರಿಗೆ ಒಂದು ಮುನ್ನೆಚ್ಚರಿಕೆಯಾಗಿದೆ.

نَذِيرٗا لِّلۡبَشَرِ ۝٣٦
37

ಅಂದರೆ ನಿಮ್ಮಲ್ಲಿ ಮುಂದಕ್ಕೆ ಬರಲು ಅಥವಾ ಹಿಂದೆಯೇ ಉಳಿಯಲು ಇಚ್ಛಿಸುವವರಿಗೆ.

لِمَن شَآءَ مِنكُمۡ أَن يَتَقَدَّمَ أَوۡ يَتَأَخَّرَ ۝٣٧
38

ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಕರ್ಮಗಳಿಗೆ ಅಡಮಾನವಾಗಿದ್ದಾನೆ.[1]

كُلُّ نَفۡسِۭ بِمَا كَسَبَتۡ رَهِينَةٌ ۝٣٨
39

ಬಲಭಾಗದ ಜನರ ಹೊರತು.

إِلَّآ أَصۡحَٰبَ ٱلۡيَمِينِ ۝٣٩
40

ಅವರು ಸ್ವರ್ಗೋದ್ಯಾನಗಳಲ್ಲಿ (ಕುಳಿತು) ಪರಸ್ಪರ ವಿಚಾರಿಸುವರು.

فِي جَنَّٰتٖ يَتَسَآءَلُونَ ۝٤٠
41

ಅಪರಾಧಿಗಳ ಕುರಿತು.

عَنِ ٱلۡمُجۡرِمِينَ ۝٤١
42

ನಿಮ್ಮನ್ನು ನರಕದಲ್ಲಿ ಬೀಳಿಸಿದ್ದೇನು?

مَا سَلَكَكُمۡ فِي سَقَرَ ۝٤٢
43

ಅವರು ಹೇಳುವರು: “ನಾವು ನಮಾಝ್ ಮಾಡುವವರಾಗಿರಲಿಲ್ಲ.

قَالُواْ لَمۡ نَكُ مِنَ ٱلۡمُصَلِّينَ ۝٤٣
44

ನಾವು ಬಡವರಿಗೆ ಆಹಾರ ನೀಡುತ್ತಿರಲಿಲ್ಲ.

وَلَمۡ نَكُ نُطۡعِمُ ٱلۡمِسۡكِينَ ۝٤٤
45

ನಾವು ಅನಗತ್ಯ ಮಾತುಕತೆ ನಡೆಸುವವರ (ಸತ್ಯನಿಷೇಧಿಗಳ) ಜೊತೆಗೆ ಅನಗತ್ಯ ಮಾತುಗಳಲ್ಲಿ ತಲ್ಲೀನರಾಗಿದ್ದೆವು.

وَكُنَّا نَخُوضُ مَعَ ٱلۡخَآئِضِينَ ۝٤٥
46

ನಾವು ಪ್ರತಿಫಲದ ದಿನವನ್ನು ನಿಷೇಧಿಸುತ್ತಿದ್ದೆವು.

وَكُنَّا نُكَذِّبُ بِيَوۡمِ ٱلدِّينِ ۝٤٦
47

ಎಲ್ಲಿಯವರೆಗೆಂದರೆ ನಮಗೆ ಸಾವು ಬರುವ ತನಕ.”

حَتَّىٰٓ أَتَىٰنَا ٱلۡيَقِينُ ۝٤٧
48

ಅವರಿಗೆ ಶಿಫಾರಸುಗಾರರ ಶಿಫಾರಸು ಪ್ರಯೋಜನಪಡುವುದಿಲ್ಲ.

فَمَا تَنفَعُهُمۡ شَفَٰعَةُ ٱلشَّٰفِعِينَ ۝٤٨
49

ಅವರಿಗೇನಾಗಿದೆ? ಅವರೇಕೆ ಉಪದೇಶದಿಂದ ವಿಮುಖರಾಗುತ್ತಿದ್ದಾರೆ?

فَمَا لَهُمۡ عَنِ ٱلتَّذۡكِرَةِ مُعۡرِضِينَ ۝٤٩
50

ಅವರು ಗಾಬರಿಗೊಂಡ ಕತ್ತೆಗಳೋ ಎಂಬಂತೆ.

كَأَنَّهُمۡ حُمُرٞ مُّسۡتَنفِرَةٞ ۝٥٠
51

ಸಿಂಹವನ್ನು ಕಂಡು ಪಲಾಯನ ಮಾಡಿದ.

فَرَّتۡ مِن قَسۡوَرَةِۭ ۝٥١
52

ಅಲ್ಲ, ವಾಸ್ತವವಾಗಿ ಅವರಲ್ಲಿ ಪ್ರತಿಯೊಬ್ಬನೂ ತನಗೆ ತೆರೆದಿಟ್ಟ ಧರ್ಮಗ್ರಂಥಗಳು ಸಿಗಬೇಕೆಂದು ಬಯಸುತ್ತಾನೆ.

بَلۡ يُرِيدُ كُلُّ ٱمۡرِيٕٖ مِّنۡهُمۡ أَن يُؤۡتَىٰ صُحُفٗا مُّنَشَّرَةٗ ۝٥٢
53

ಇಲ್ಲ; ವಾಸ್ತವವಾಗಿ ಅವರು ಪರಲೋಕವನ್ನು ಭಯಪಡುವುದಿಲ್ಲ.

كـَلَّاۖ بَل لَّا يَخَافُونَ ٱلۡأٓخِرَةَ ۝٥٣
54

ಖಂಡಿತ ಇಲ್ಲ. ನಿಶ್ಚಯವಾಗಿಯೂ ಇದು (ಕುರ್‌ಆನ್) ಉಪದೇಶವಾಗಿದೆ.

كـَلَّآ إِنَّهُۥ تَذۡكِرَةٞ ۝٥٤
55

ಇಷ್ಟವಿರುವವರು ಅದರಿಂದ ಉಪದೇಶವನ್ನು ಪಡೆದುಕೊಳ್ಳಲಿ.

فَمَن شَآءَ ذَكَرَهُۥ ۝٥٥
56

ಆದರೆ ಅಲ್ಲಾಹು ಇಚ್ಛಿಸಿದ ಹೊರತು ಅವರು ಅದರಿಂದ ಉಪದೇಶ ಪಡೆಯುವುದಿಲ್ಲ. ಅವನು ಭಯಪಡಲು ಅರ್ಹನಾಗಿದ್ದಾನೆ ಮತ್ತು ಕ್ಷಮಿಸಲು ಅರ್ಹನಾಗಿದ್ದಾನೆ.

وَمَا يَذۡكُرُونَ إِلَّآ أَن يَشَآءَ ٱللَّهُۚ هُوَ أَهۡلُ ٱلتَّقۡوَىٰ وَأَهۡلُ ٱلۡمَغۡفِرَةِ ۝٥٦